ಪ್ರಧಾನ ಮಂತ್ರಿಯವರ ಕಛೇರಿ

ಮಾಜಿ ಮುಖ್ಯ ನ್ಯಾಯಮೂರ್ತಿ ಎ.ಎಸ್. ಆನಂದ್ ನಿಧನಕ್ಕೆ ಪ್ರಧಾನಿ ಸಂತಾಪ

Posted On: 01 DEC 2017 7:23PM by PIB Bengaluru

ಮಾಜಿ ಮುಖ್ಯ ನ್ಯಾಯಮೂರ್ತಿ ಎ.ಎಸ್. ಆನಂದ್ ನಿಧನಕ್ಕೆ ಪ್ರಧಾನಿ ಸಂತಾಪ 
 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಎ.ಎಸ್. ಆನಂದ್ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. 

“ಭಾರತದ ಮಾಜಿ ಮುಖ್ಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಎ.ಎಸ್. ಆನಂದ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಈ ದುಃಖದ ಸಂದರ್ಭದಲ್ಲಿ ಅವರ ಕುಟುಂಬದವರೊಂದಿಗೆ ನನ್ನ ಸಂವೇದನೆ ಇದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ” ಎಂದು ಪ್ರಧಾನಿ ಹೇಳಿದ್ದಾರೆ. 
 

****



(Release ID: 1511602) Visitor Counter : 59


Read this release in: English