ನೀತಿ ಆಯೋಗ

ಮಹತ್ವಾಕಾಂಕ್ಷೆಯ ಜಿಲ್ಲೆಗಳ ಪರಿವರ್ತನೆಯ ಕುರಿತು ಸಮಾವೇಶ ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ

Posted On: 05 JAN 2018 1:20PM by PIB Bengaluru

ಮಹತ್ವಾಕಾಂಕ್ಷೆಯ ಜಿಲ್ಲೆಗಳ ಪರಿವರ್ತನೆಯ ಕುರಿತು ಸಮಾವೇಶ ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆ ಮಹತ್ವಾಕಾಂಕ್ಷೆಯ ಜಿಲ್ಲೆಗಳ ಪರಿವರ್ತನೆ ಕುರಿತ ಸಮಾವೇಶ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮವನ್ನು ನೀತಿ ಆಯೋಗ ದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಆಯೋಜಿಸಿದೆ. ಪ್ರಧಾನಿಯವರು 100ಕ್ಕೂ ಹೆಚ್ಚು ಜಿಲ್ಲೆಗಳ ಪರಿವರ್ತನೆಯ ಹೊಣೆ ಹೊತ್ತಿರುವ ಅಧಿಕಾರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಈ ಕಾರ್ಯಕ್ರಮವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ  2022ರ ಹೊತ್ತಿಗೆ ನವ ಭಾರತ ಮುನ್ನೋಟವನ್ನು ಗಮನದಲ್ಲಿಟ್ಟುಕೊಂಡಿದೆ. ಕೇಂದ್ರ ಸರ್ಕಾರವುನಿರ್ದಿಷ್ಟ ಅಭಿವೃದ್ಧಿಯ ಮಾನದಂಡಗಳ ಮೇಲೆ ಹಿಂದುಳಿದಿರುವ ಜಿಲ್ಲೆಗಳ ತ್ವರಿತ ಪರಿವರ್ತನೆಗಾಗಿ ಪ್ರಮುಖ ನೀತಿಯ ಉಪಕ್ರಮವನ್ನು ಕೈಗೊಂಡಿದೆ. ಹೆಚ್ಚುವರಿ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಶ್ರೇಣಿಯ ಹಿರಿಯ ಸರ್ಕಾರಿ ಅಧಿಕಾರಿಗಳನ್ನು ಕೇಂದ್ರ ಸರ್ಕಾರದ ಪ್ರಯತ್ನಗಳೊಂದಿಗೆ ರಾಜ್ಯಗಳ ಸಹಯೋಗಕ್ಕೆ ಮತ್ತು ಈ ಜಿಲ್ಲೆಗಳ ನಿರ್ದಿಷ್ಟ ಅಭಿವೃದ್ಧಿ ಅಗತ್ಯಗಳ ಸವಾಲು ಎದುರಿಸಲು ಉಸ್ತುವಾರಿ ಅಧಿಕಾರಿಗಳನ್ನಾಗಿ ನಿಯುಕ್ತಿಗೊಳಿಸಲಾಗಿದೆ.



(Release ID: 1515615) Visitor Counter : 94


Read this release in: English