ಕೃಷಿ ಸಚಿವಾಲಯ

ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ ಅಡಿಯಲ್ಲಿ ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳ 13.4 ಕೋಟಿ ಫಲಾನುಭವಿಗಳಿಗೆ 1.78 ಲಕ್ಷ ಮೆಟ್ರಿಕ್ ಟನ್ ಬೇಳೆ ವಿತರಣೆ

Posted On: 27 MAY 2020 7:03PM by PIB Bengaluru

ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ ಅಡಿಯಲ್ಲಿ ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳ

13.4 ಕೋಟಿ ಫಲಾನುಭವಿಗಳಿಗೆ 1.78 ಲಕ್ಷ ಮೆಟ್ರಿಕ್ ಟನ್ ಬೇಳೆ ವಿತರಣೆ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ ಲಾಕ್ ಡೌನ್ ಅವಧಿಯಲ್ಲಿ

9.67 ಕೋಟಿ ರೈತರಿಗೆ 19,350.84 ಕೋಟಿ ರೂ. ಬಿಡುಗಡೆ

ಪಿಎಂ-ಜಿಕೆವೈ ಅಡಿಯಲ್ಲಿ ಬೇಳೆ ವಿತರಣೆ

ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ (ಪಿಎಂ-ಜಿಕೆವೈ) ಅಡಿಯಲ್ಲಿ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ 4.57 ಲಕ್ಷ ಮೆಟ್ರಿಕ್ ಟನ್ ಬೇಳೆ ರವಾನಿಸಲಾಗಿದೆ. ಪೈಕಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು 1340.61 ಲಕ್ಷ ಫಲಾನುಭವಿಗಳಿಗೆ 1.78 ಲಕ್ಷ ಮೆಟ್ರಿಕ್ ಟನ್ ಬೇಳೆಯನ್ನು ವಿತರಿಸಿವೆ.

ಲಾಕ್ ಡೌನ್ ಅವಧಿಯಲ್ಲಿ ನಾಫೆಡ್ ನಿಂದ ಬೇಳೆ ಮತ್ತು ಎಣ್ಣೆ ಬೀಜಗಳ ಖರೀದಿ ಸ್ಥಿತಿಗತಿ:

  • 7.33 ಲಕ್ಷ ಮೆಟ್ರಿಕ್ ಟನ್ ಬೇಳೆ(ಚನ್ನ-ಕಡಲೇ)ಅನ್ನು 9 ರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ರಾಜಸ್ಥಾನ, ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್, ಉತ್ತರ ಪ್ರದೇಶ ಮತ್ತು ಹರಿಯಾಣ ರಾಜ್ಯಗಳಿಂದ ಖರೀದಿ ಮಾಡಲಾಗಿದೆ.
  • 5.91 ಲಕ್ಷ ಮೆಟ್ರಿಕ್ ಟನ್ ಸಾಸಿವೆಯನ್ನು ಐದು ರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ಹರಿಯಾಣದಿಂದ ಖರೀದಿಸಲಾಗಿದೆ.
  • 2.41 ಲಕ್ಷ ಮೆಟ್ರಿಕ್ ಟನ್ ತೊಗರಿಬೇಳೆಯನ್ನು 8 ರಾಜ್ಯಗಳಾದ ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಕರ್ನಾಟಕ, ಮಧ್ಯಪ್ರದೇಶ, ಗುಜರಾತ್ ಮತ್ತು ಒಡಿಶಾಗಳಿಂದ ಖರೀದಿಸಲಾಗಿದೆ.

ಹಿಂಗಾರು ಮಾರುಕಟ್ಟೆ ಹಂಗಾಮಿನಲ್ಲಿ ಗೋಧಿ ಖರೀದಿ

ಹಿಂಗಾರು ಮಾರುಕಟ್ಟೆ ಹಂಗಾಮು(ಆರ್ ಎಂಎಸ್) 2020-21ನಲ್ಲಿ ಭಾರತೀಯ ಆಹಾರ ನಿಗಮ (ಎಫ್ ಸಿಐ)ಗೆ 359.10 ಲಕ್ಷ ಮೆಟ್ರಿಕ್ ಟನ್ ಗೋಧಿ ಬಂದಿದ್ದು, ಪೈಕಿ 347.54 ಲಕ್ಷ ಮೆಟ್ರಿಕ್ ಟನ್ ಖರೀದಿಸಲಾಗಿದೆ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಯೋಜನೆ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಯೋಜನೆ ಅಡಿಯಲ್ಲಿ ಲಾಕ್ ಡೌನ್ ಅವಧಿಯಲ್ಲಿ 24.03.2020ರಿಂದ ಇಲ್ಲಿಯವರೆಗೆ 9.67 ಕೋಟಿ ರೈತರಿಗೆ ಅನುಕೂಲ ಕಲ್ಪಿಸಿದ್ದು, ಅವರಿಗೆ ಈವರೆಗೆ 19,350.84 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

***



(Release ID: 1627308) Visitor Counter : 218