ಪ್ರಧಾನ ಮಂತ್ರಿಯವರ ಕಛೇರಿ

ಚಂಡಮಾರುತದ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ಮುನ್ನೆಚ್ಚರಿಕೆ ಮತ್ತು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಜನರಿಗೆ ಕರೆ

ಪ್ರಕಟಣಾ ದಿನಾಂಕ: 02 JUN 2020 5:24PM by PIB Bengaluru

 

ಭಾರತದ ಪಶ್ಚಿಮ ಕರಾವಳಿಯ ಕೆಲವು ಭಾಗಗಳಲ್ಲಿ ಚಂಡಮಾರುತದ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದಾರೆಸಾಧ್ಯವಿರುವ ಎಲ್ಲಾ ಮುನ್ನೆಚ್ಚರಿಕೆಗಳು ಮತ್ತು ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅವರು ಜನರಿಗೆ ಕರೆಕೊಟ್ಟಿದ್ದಾರೆ.

"ಭಾರತದ ಪಶ್ಚಿಮ ಕರಾವಳಿಯ ಕೆಲವು ಭಾಗಗಳಲ್ಲಿ ಚಂಡಮಾರುತದ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲಾಗಿದೆಎಲ್ಲರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆಸಾಧ್ಯವಿರುವ ಎಲ್ಲ ಮುನ್ನೆಚ್ಚರಿಕೆಗಳು ಮತ್ತು ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ನಾನು ಜನರನ್ನು ಕೋರುತ್ತೇನೆ "ಎಂದು ಪ್ರಧಾನಿಯವರು ಹೇಳಿದ್ದಾರೆ.


(ಪ್ರಕಟಣೆ ಐ.ಡಿ.: 1628917) ವಿಸಿಟರ್ ಕೌಂಟರ್ : 260