ಪ್ರಧಾನ ಮಂತ್ರಿಯವರ ಕಛೇರಿ

ಕೇದಾರನಾಥ ಧಾಮ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ಪ್ರಧಾನಮಂತ್ರಿ

Posted On: 15 JUL 2020 2:17PM by PIB Bengaluru

ಕೇದಾರನಾಥ ಧಾಮ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ಪ್ರಧಾನಮಂತ್ರಿ

 

 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇದಾರನಾಥ ಧಾಮದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು ಮತ್ತು ಧಾಮದ ಪಾವಿತ್ಯ್ಯತೆ ಹೆಚ್ಚಿಸಲು ಕೈಗೊಂಡಿರುವ ಪ್ರಯತ್ನಗಳ ಬಗ್ಗೆಯೂ ಪರಿಶೀಲಿಸಿದರು.

ಕೇದಾರನಾಥ ದೇವಾಲಯ ಮತ್ತು ಜಗದ್ಗುರು ಆದಿ ಶಂಕರಾಚಾರ್ಯರ ಸಮಾಧಿ ಸ್ಥಳದ ಪಾವಿತ್ರ್ಯ ಕಾಪಾಡುವುದು, ಸ್ವಚ್ಛತೆ ಕಾಯ್ದುಕೊಳ್ಳುವುದು ಮತ್ತು ಅವುಗಳ ಸಮಗ್ರ ಅಭಿವೃದ್ಧಿ ಕುರಿತಂತೆ ಪ್ರಮುಖವಾಗಿ ಚರ್ಚೆ ನಡೆಯಿತು. ಗೌರಿಕುಂಡ-ಕೇದಾರನಾಥ ಮಾರ್ಗದಲ್ಲಿ ಪ್ರವಾಸಿಗರಿಗೆ ಎಲ್ಲ ಬಗೆಯ ಸೌಕರ್ಯಗಳನ್ನು ಒದಗಿಸುವ ಕುರಿತಂತೆ ಮತ್ತು ತಂತ್ರಜ್ಞಾನವನ್ನು ಬಳಸಿಕೊಂಡು ಧಾರ್ಮಿಕ ಯಾತ್ರಾ ಕೇಂದ್ರವನ್ನು ಐತಿಹಾಸಿಕ ಹಾಗೂ ಸಾಂಸ್ಕೃತಿಕ ಮಹತ್ವ ಸಾರುವಂತೆ ಮಾಡುವ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸುವ ಬಗ್ಗೆ ಪರಿಶೀಲನಾ ಸಭೆಯಲ್ಲಿ ಮುಖ್ಯವಾಗಿ ಸಮಾಲೋಚನೆ ನಡೆಯಿತು.

***



(Release ID: 1638733) Visitor Counter : 188