ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ

ಮುಂಗಾರು  ಹಂಗಾಮಿನಲ್ಲಿ ದೇಶದೆಲ್ಲೆಡೆ ಯೂರಿಯಾ ಮಾರಾಟ ಹೆಚ್ಚಳ: ಕೇಂದ್ರ ಸಚಿವ ಸದಾನಂದಗೌಡ


ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಶ್ರೀ ಸದಾನಂದ ಗೌಡರನ್ನು ಭೇಟಿ ಮಾಡಿದ ಕರ್ನಾಟಕ ಕೃಷಿ ಸಚಿವ ಶ್ರೀ ಬಿ.ಸಿ. ಪಾಟೀಲ್

Posted On: 27 AUG 2020 3:57PM by PIB Bengaluru

ಮುಂಗಾರು ಹಂಗಾಮಿನಲ್ಲಿ  ಯೂರಿಯಾ ಮಾರಾಟವು ದೇಶದ ಎಲ್ಲೆಡೆ ಹೆಚ್ಚಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವ ಶ್ರೀ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.

ಅಗತ್ಯವಿದ್ದಾಗ ದೇಶೀಯ ಘಟಕಗಳಿಂದ ಮತ್ತು ಆಮದು ಮೂಲಗಳಿಂದ ಸರಬರಾಜನ್ನು ಬಲಪಡಿಸಲು ಕೇಂದ್ರ ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ಋತುವಿನಲ್ಲಿ ಬೇಡಿಕೆಗೆ ಅನುಗುಣವಾಗಿ ಪೂರೈಕೆಯನ್ನು ಹೆಚ್ಚಿಸಲು ಆಮದು ಆವರ್ತನವನ್ನು ಕಡಿಮೆ ಮಾಡಲಾಗಿದೆ ಎಂದು ಅವರು ಹೇಳಿದರು.

ಕರ್ನಾಟಕದಲ್ಲಿ ಯೂರಿಯಾ ಲಭ್ಯತೆ ಕುರಿತು ಇಂದು ನವದೆಹಲಿಯಲ್ಲಿ ತಮ್ಮನ್ನು ಭೇಟಿ ಮಾಡಿದ ಕರ್ನಾಟಕದ ಕೃಷಿ ಸಚಿವ ಶ್ರೀ ಬಿ.ಸಿ. ಪಾಟೀಲ್ ಅವರೊಂದಿಗೆ ಕೇಂದ್ರ ಸಚಿವರು ಮಾತನಾಡುತ್ತಿದ್ದರು.

ಕೇಂದ್ರ ಸರ್ಕಾರದ ಸತತ ಪ್ರಯತ್ನ ಮತ್ತು ಆಯಾ ರಾಜ್ಯ ಸರ್ಕಾರಗಳ ನಿರಂತರ ಬೆಂಬಲದಿಂದಾಗಿ ಯೂರಿಯಾ ದಾಸ್ತಾನು ದೇಶಾದ್ಯಂತ ಉತ್ತಮವಾಗಿದೆ ಎಂದು ಶ್ರೀ ಗೌಡ ಹೇಳಿದರು.

http://static.pib.gov.in/WriteReadData/userfiles/image/IMG-20200827-WA0060LMHX.jpg

ಕರ್ನಾಟಕಕ್ಕೆ ಸಂಬಂಧಿಸಿದಂತೆ, 2020 ಇಡೀ ಮುಂಗಾರು ಋತುವಿನ ಬೇಡಿಕೆ 8.50 ಲಕ್ಷ ಮೆಟ್ರಿಕ್ ಟನ್ ಆಗಿದೆ. ಇದಕ್ಕೆ ಅನುಗುಣವಾಗಿ, ಏಪ್ರಿಲ್ 1 ರಿಂದ ಆಗಸ್ಟ್ 26 ರವರೆಗಿನ ಬೇಡಿಕೆಯು 6.46 ಲಕ್ಷ ಮೆಟ್ರಿಕ್ ಟನ್ ಆಗಿದ್ದು, ರಸಗೊಬ್ಬರ ಇಲಾಖೆಯು 10.24 ಲಕ್ಷ ಮೆ.ಟನ್ ಲಭ್ಯತೆಯನ್ನು ಖಾತ್ರಿಪಡಿಸಿದೆ, ಇದರಲ್ಲಿ ಆರಂಭಿಕ ಪಾಲು 3.16 ಲಕ್ಷ ಮೆಟ್ರಿಕ್ ಟನ್ ಸೇರಿದೆ. ಅವಧಿಯಲ್ಲಿ, 8.26 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಮಾರಾಟವಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 5.20 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಮಾರಾಟವಾಗಿತ್ತು ಎಂದು ಸಚಿವರು ತಿಳಿಸಿದರು.

ಋತುವಿನಲ್ಲಿ ಯೂರಿಯಾಕ್ಕೆ ಹೆಚ್ಚಿರುವ ಬೇಡಿಕೆಯ ಹೊರತಾಗಿಯೂ, ಯೂರಿಯಾ ಲಭ್ಯತೆಯು ರಾಜ್ಯದಲ್ಲಿ ಉತ್ತಮವಾಗಿದೆ ಎಂದ ಅವರು, ಸಂಗ್ರಹಕಾರರು ಮತ್ತು ಕಾಳ ದಂಧೆ ಮಾರಾಟಗಾರರ ವಿರುದ್ಧ ಕರ್ನಾಟಕ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಶ್ರೀ ಗೌಡ ಮೆಚ್ಚುಗೆ ವ್ಯಕ್ತಪಡಿಸಿದರು.

ಮುಂದಿನ ದಿನಗಳಲ್ಲಿ ಯೂರಿಯಾ ಪೂರೈಕೆಯನ್ನು ಇನ್ನೂ ಹೆಚ್ಚಿಸಲಾಗುವುದು. ರಸಗೊಬ್ಬರಗಳ ಇಲಾಖೆಯು ಲಭ್ಯತೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಕರ್ನಾಟಕದ ರೈತರಿಗೆ ಯೂರಿಯಾ ಸಮಯಕ್ಕೆ ಸರಿಯಾಗಿ ಲಭ್ಯವಾಗುವಂತೆ ಇಲಾಖೆಯಿಂದ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ರಾಜ್ಯಕ್ಕೆ ಸಕಾಲದಲ್ಲಿ ರಸಗೊಬ್ಬರಗಳನ್ನು ಪೂರೈಸಿದ್ದಕ್ಕಾಗಿ ಶ್ರೀ ಬಿ.ಸಿ.ಪಾಟೀಲ್ ಕೇಂದ್ರ ಸಚಿವರು ಮತ್ತು ರಸಗೊಬ್ಬರ ಇಲಾಖೆಯ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದರು. ಆದಾಗ್ಯೂ, ರಾಜ್ಯದಲ್ಲಿ ಯೂರಿಯಾ ಪೂರೈಕೆಯನ್ನು ಇನ್ನೂ ಹೆಚ್ಚಿಸಬೇಕಾಗಿದೆ ಎಂದು ಅವರು ಹೇಳಿದರು. ರಾಜ್ಯದಲ್ಲಿ ನಿವ್ವಳ ಬಿತ್ತನೆ ಪ್ರದೇಶದಲ್ಲಿ ಸುಮಾರು 11.17 ಲಕ್ಷ ಹೆಕ್ಟೇರ್ ಏರಿಕೆಯಾಗಿದೆ. ಇದು ಹಿಂದಿನ ಐದು ವರ್ಷಗಳ ಸರಾಸರಿಗಿಂತ ಶೇ.20 ರಷ್ಟು ಹೆಚ್ಚಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಯೂರಿಯಾ ಬೇಡಿಕೆ ಮತ್ತು ಮಾರಾಟ ಹೆಚ್ಚಾಗಿದೆ ಎಂದು ಶ್ರೀ ಪಾಟೀಲ್ ತಿಳಿಸಿದರು.

ಕರ್ನಾಟಕದಲ್ಲಿ ಯೂರಿಯಾ ಲಭ್ಯತೆಯನ್ನು ಹೆಚ್ಚಿಸಲು ಅವರು ಕೇಂದ್ರ ಸರ್ಕಾರದ ಬೆಂಬಲವನ್ನು ಕೋರಿದರು.

***



(Release ID: 1649163) Visitor Counter : 127