ಪ್ರಧಾನ ಮಂತ್ರಿಯವರ ಕಛೇರಿ

ಉತ್ತರಾಖಂಡದಲ್ಲಿ ನಮಾಮಿ ಗಂಗೆ ಮಿಷನ್ ಅಡಿ ಆರು ಬೃಹತ್ ಯೋಜನೆಗಳನ್ನು ಉದ್ಘಾಟಿಸಲಿರುವ ಪ್ರಧಾನಿ


“ರೋಯಿಂಗ್ ಡೌನ್ ದಿ ಗಂಗಾ” ಪುಸ್ತಕ ಬಿಡುಗಡೆ

ಗಂಗಾ ನದಿ ಕುರಿತ ಪ್ರಪ್ರಥಮ ವಸ್ತುಸಂಗ್ರಹಾಲಯ “ಗಂಗಾ ಅವಲೋಕನ” ಉದ್ಘಾಟನೆ

प्रविष्टि तिथि: 28 SEP 2020 5:18PM by PIB Bengaluru

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಉತ್ತರಾಖಂಡದಲ್ಲಿ ನಮಾಮಿ ಗಂಗೆ ಮಿಷನ್ ಅಡಿಯಲ್ಲಿ ಆರು ಬೃಹತ್ ಯೋಜನೆಗಳನ್ನು 2020 ಸೆಪ್ಟೆಂಬರ್ 29 ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ.

68 ಎಂಎಲ್ಡಿ ಎಸ್ಟಿಪಿ ನಿರ್ಮಾಣ, ಹರಿದ್ವಾರದ ಜಗ್ಜೀತ್ಪುರದಲ್ಲಿ ಅಸ್ತಿತ್ವದಲ್ಲಿರುವ 27 ಎಂಎಲ್ಡಿ ಎಸ್ಟಿಪಿ ಮೇಲ್ದರ್ಜೆ ಮತ್ತು ಹರಿದ್ವಾರದ ಸರಾಯ್ ನಲ್ಲಿ 18 ಎಂಎಲ್ಡಿ ಎಸ್ಟಿಪಿ ನಿರ್ಮಾಣ ಯೋಜನೆಗಳಲ್ಲಿ ಸೇರಿವೆ. ಹೈಬ್ರಿಡ್ ಪಿಪಿಪಿ ಮಾದರಿಯಲ್ಲಿ  ಪೂರ್ಣಗೊಂಡಿರುವ ಜಗ್ಜೀತ್ಪುರದ ಮೊದಲ ಒಳಚರಂಡಿ ಯೋಜನೆಯ 68 ಎಂಎಲ್ಡಿ  ಎಸ್ಟಿಪಿ ಉದ್ಘಾಟನೆಯನ್ನೂ ಪ್ರಧಾನಿ ನೆರವೇರಿಸಲಿದ್ದಾರೆ.

ಹೃಷಿಕೇಶದ ಲಕ್ಕಡ್ ಘಾಟ್ನಲ್ಲಿ 26 ಎಂಎಲ್ಡಿ ಎಸ್ಟಿಪಿ ಉದ್ಘಾಟಿಸಲಾಗುವುದು.

ಹರಿದ್ವಾರ-ಹೃಷಿಕೇಶ ವಲಯವು ಗಂಗಾ ನದಿಗೆ ಸುಮಾರು ಶೇ.80 ರಷ್ಟು ತ್ಯಾಜ್ಯ ನೀರಿನ್ನು ಸೇರಿಸುತ್ತದೆ. ಆದ್ದರಿಂದ, ಎಸ್ಟಿಪಿಗಳ ಉದ್ಘಾಟನೆಯು ಗಂಗಾ ನದಿಯ ಸ್ವಚ್ಛತಾ ಯೋಜನೆಯಲ್ಲಿ ಮಹತ್ವದ್ದಾಗಿದೆ.

ಮುನಿ ಕಿ ರೇತಿ ಪಟ್ಟಣದಲ್ಲಿ, ಚಂದ್ರೇಶ್ವರ ನಗರದ 7.5 ಎಂಎಲ್ಡಿ ಎಸ್ಟಿಪಿ ದೇಶದ ಮೊದಲ 4 ಅಂತಸ್ತಿನ ಒಳಚರಂಡಿ ಸಂಸ್ಕರಣಾ ಘಟಕವಾಗಲಿದ್ದು, ಅಲ್ಲಿ ಭೂ ಲಭ್ಯತೆಗಿದ್ದ ಮಿತಿಯನ್ನು ಅವಕಾಶವನ್ನಾಗಿ ಪರಿವರ್ತಿಸಲಾಗಿದೆ. ಎಸ್ಟಿಪಿಯನ್ನು 900 ಎಸ್ಕ್ಯೂಎಂಗಿಂತ ಕಡಿಮೆ ಪ್ರದೇಶದಲ್ಲಿ ನಿರ್ಮಿಸಲಾಗಿದೆ. ಇದು ಅಷ್ಟು ಸಾಮರ್ಥ್ಯದ ಎಸ್ಟಿಪಿಗಳಿಗೆ ಬೇಕಾಗುವ ಪ್ರದೇಶದ ಶೇ.30 ರಷ್ಟು ಮಾತ್ರ ಆಗಿದೆ.

ಚೋರ್ಪಾನಿಯಲ್ಲಿ 5 ಎಂಎಲ್ಡಿ ಎಸ್ಟಿಪಿ ಮತ್ತು ಬದರಿನಾಥ್ನಲ್ಲಿ 1 ಎಂಎಲ್ಡಿ ಮತ್ತು 0.01 ಎಮ್ಎಲ್ಡಿ ಸಾಮರ್ಥ್ಯ ಹೊಂದಿರುವ ಎರಡು ಎಸ್ಟಿಪಿಗಳನ್ನು ಪ್ರಧಾನಿಯವರು ಉದ್ಘಾಟಿಸಲಿದ್ದಾರೆ.

ಗಂಗಾ ನದಿಗೆ ಸಮೀಪವಿರುವ 17 ಪಟ್ಟಣಗಳಿಂದ ಮಾಲಿನ್ಯವನ್ನು ತಡೆಗಟ್ಟಲು ಉತ್ತರಾಖಂಡದಲ್ಲಿ ಎಲ್ಲಾ 30 ಯೋಜನೆಗಳು  ಈಗ ಪೂರ್ಣಗೊಂಡಿದ್ದು, ಇದೊಂದು ಮಹತ್ವದ ಸಾಧನೆಯಾಗಿದೆ.

ಗಂಗಾ ನದಿಯ ಪುನಶ್ಚೇತನಕ್ಕಾಗಿ ಮಾಡಿರುವ ಕಾಮಗಾರಿಗಳು, ಸಂಸ್ಕೃತಿ, ಜೀವವೈವಿಧ್ಯತೆಗಳನ್ನು ಪ್ರದರ್ಶಿಸಲು ರೂಪಿಸುವ ಗಂಗಾ ನದಿಯ ಮೊದಲ ವಸ್ತುಸಂಗ್ರಹಾಲಯಗಂಗಾ ಅವಲೋಕನವನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ವಸ್ತುಸಂಗ್ರಹಾಲಯವು ಹರಿದ್ವಾರದ ಚಾಂಡಿ ಘಾಟ್ನಲ್ಲಿದೆ.

ಸ್ವಚ್ಛ ಗಂಗೆಗಾಗಿ ರಾಷ್ಟ್ರೀಯ ಅಭಿಯಾನ ಮತ್ತು ಭಾರತೀಯ ವನ್ಯಜೀವಿ ಸಂಸ್ಥೆ ಪ್ರಕಟಿಸಿರುವರೋಯಿಂಗ್ ಡೌನ್ ದಿ ಗಂಗಾಪುಸ್ತಕವನ್ನು ಸಮಾರಂಭದಲ್ಲಿ ಬಿಡುಗಡೆ ಮಾಡಲಾಗುವುದು. ವರ್ಣರಂಜಿತ ಪುಸ್ತಕವು ಗಂಗಾ ನದಿಯ ಜೀವವೈವಿಧ್ಯತೆ ಮತ್ತು ಸಂಸ್ಕೃತಿಯ ಮಿಳಿತವಾಗಿದೆ. ಪುಸ್ತಕವು ಗಂಗಾ ನದಿಯ ಕಥೆಯನ್ನು ಅದರ ಮೂಲವಾದ ಗೋಮಖದಿಂದ ಸಮುದ್ರ ಸೇರುವ ಗಂಗಾ ಸಾಗರದವರೆಗೆ ನದಿಯಲ್ಲಿ ಸಂಚರಿಸಿದರೆ ಆಗುವ ಅನುಭವವನ್ನು ಕಟ್ಟಿಕೊಡುತ್ತದೆ.

ಜಲ ಜೀವನ್ ಮಿಷನ್ ಲೋಗೋ ಮತ್ತುಗ್ರಾಮ ಪಂಚಾಯತ್ಗಳಿಗೆ ಮಾರ್ಗದರ್ಶಿಕೆ ಮತ್ತು ಜಲ ಜೀವನ್ ಮಿಷನ್ ಅಡಿಯಲ್ಲಿ ಪಾನಿ ಸಮಿತಿಗಳುಇವುಗಳನ್ನೂ  ಪ್ರಧಾನಿ ಅನಾವರಣಗೊಳಿಸಲಿದ್ದಾರೆ.

ದಯವಿಟ್ಟು ಲಿಂಕ್ನಲ್ಲಿ ಜೊತೆಯಾಗಿ: https://pmevents.ncog.gov.in/

***


(रिलीज़ आईडी: 1659852) आगंतुक पटल : 318
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Manipuri , Bengali , Punjabi , Gujarati , Odia , Tamil , Telugu , Malayalam