ಪ್ರಧಾನ ಮಂತ್ರಿಯವರ ಕಛೇರಿ

ಲಾಲ್ ಬಹಾದ್ದೂರ್ ಶಾಸ್ತ್ರೀ ಜಯಂತಿ: ಪ್ರಧಾನಮಂತ್ರಿ ಸ್ಮರಣೆ

Posted On: 02 OCT 2020 9:11AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಶ್ರೀ ಲಾಲ್ ಬಹಾದ್ದೂರ್ ಶಾಸ್ತ್ರೀ ಜಯಂತಿಯಂದು ಅವರನ್ನು ಸ್ಮರಿಸಿದ್ದಾರೆ.

"ಲಾಲ್ ಬಹಾದ್ದೂರ್ ಶಾಸ್ತ್ರೀ ವಿನಮ್ರತೆ ಮತ್ತು ದೃಢತೆ ಹೊಂದಿದ್ದರು.

ಅವರು ಸರಳತೆಯ ಸಾಕಾರಮೂರ್ತಿಯಾಗಿ ನಮ್ಮ ದೇಶದ ಕಲ್ಯಾಣಕ್ಕಾಗಿ ಬದುಕು ಸವೆಸಿದರು.

ನಾವು ಅವರ ಜಯಂತಿಯಂದು ಭಾರತಕ್ಕೆ ಅವರು ಮಾಡಿದ ಪ್ರತಿಯೊಂದು ಕಾರ್ಯವನ್ನೂ ಕೃತಜ್ಞತಾಪೂರ್ವಕವಾಗಿ ಸ್ಮರಿಸುತ್ತೇವೆ.", ಎಂದು ಪ್ರಧಾನಿ ತಿಳಿಸಿದ್ದಾರೆ.

***



(Release ID: 1660939) Visitor Counter : 115