ಭೂವಿಜ್ಞಾನ ಸಚಿವಾಲಯ

ಕಾಕಿನಾಡದ ಮೂಲಕ ಉತ್ತರ ಆಂಧ್ರ ಕರಾವಳಿ ದಾಟಿದ ವಾಯುಬಾರ ಕುಸಿತ


ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಕೊಂಕಣ, ಗೋವಾ ಸೇರಿ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ

ಗಂಟೆಗೆ 55 ರಿಂದ 65 ಕಿಲೋಮೀಟರ್ ವೇಗದಲ್ಲಿ ಸಾಗುತ್ತಿರುವ ಗಾಳಿ

Posted On: 13 OCT 2020 9:11AM by PIB Bengaluru

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಚಂಡಮಾರುತ ಮುನ್ಸೂಚನಾ ವಿಭಾಗ ಕೆಳಗಿನ ವಿವರಗಳನ್ನು ಪ್ರಕಟಿಸಿದೆ.

ಅದರಂತೆ ಬಂಗಾಳಕೊಲ್ಲಿಯ ಪೂರ್ವ ಕೇಂದ್ರೀಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಅದು ಪಶ್ಚಿಮದಿಂದ ವಾಯುವ್ಯದೆಡೆಗೆ ಕಳೆದ ಆರು ಗಂಟೆಗಳಿಂದ ಗಂಟೆಗೆ 17 ಕಿಲೋಮೀಟರ್ ವೇಗದಲ್ಲಿ ಸಾಗುತ್ತಿದ್ದು, ಇಂದು ಬೆಳಗ್ಗೆ 5.30ಕ್ಕೆ ವಿಶಾಖಪಟ್ಟಣಂನಿಂದ ದಕ್ಷಿಣ-ನೈಋತ್ಯಕ್ಕೆ ಸುಮಾರು 120 ಕಿಲೋಮೀಟರ್ ದೂರದಲ್ಲಿರುವ ಆಂಧ್ರಪ್ರದೇಶದ ಕಾಕಿನಾಡ ಸಮೀಪದಲ್ಲಿ ಕೇಂದ್ರೀಕೃತವಾಗಿತ್ತು.

ಇತ್ತೀಚಿನ ನಿಗಾ ಮುನ್ಸೂಚನೆ ಅಂತೆ ಅದು ಆಂಧ್ರಪ್ರದೇಶದ ಉತ್ತರ ಕರಾವಳಿಯನ್ನು ದಾಟಿ, ಕಾಕಿನಾಡದ ಮೂಲಕ ಗಂಟೆಗೆ ಸುಮಾರು 55 ರಿಂದ 65 ಕಿಲೋಮೀಟರ್ ವೇಗದಲ್ಲಿ ಸಾಗಿ ಹಾದು ಹೋಗಿದೆ. ವಾಯುಭಾರ ಕುಸಿತವನ್ನು ಮಚಲಿಪಟ್ಟಣಂ, ವಿಶಾಖಪಟ್ಟಣಂ, ಗೋಪಾಲಪುರದಲ್ಲಿ ರಡಾರ್ ಗಳ ಮೂಲಕ ನಿಗಾವಹಿಸಲಾಗಿತ್ತು. ರಡಾರ್ ಸಂಗ್ರಹಿಸಿರುವ ದೃಶ್ಯಗಳಂತೆ ಆಂಧ್ರಪ್ರದೇಶದ ಕರಾವಳಿ ಜಿಲ್ಲೆಗಳು ಮತ್ತು ಅದಕ್ಕೆ ಹೊಂದಿಕೊಂಡ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.

ಮಳೆ ಮುನ್ಸೂಚನೆ:

13 ಅಕ್ಟೋಬರ್ 2020: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ದಕ್ಷಿಣ ಕೊಂಕಣ, ಗೋವಾ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಸಾಧಾರಣದಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆ ಇದೆ.

14 ಅಕ್ಟೋಬರ್ 2020: ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ಗೋವಾ, ಕೊಂಕಣ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸಾಧಾರಣದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ.

ಗಾಳಿ ಮುನ್ಸೂಚನೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಆಂಧ್ರಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಿರುಗಾಳಿ ಗಂಟೆಗೆ 55 ರಿಂದ 65 ಕಿಲೋಮೀಟರ್ ವೇಗದಲ್ಲಿ ಸಾಗುತ್ತಿದ್ದು, ನಂತರ ಅದರ ತೀವ್ರತೆ ತಗ್ಗಲಿದೆ.

ಸಮುದ್ರದ ಸ್ಥಿತಿಗತಿ

ಬಂಗಾಳಕೊಲ್ಲಿಯ ವಾಯುವ್ಯಕ್ಕೆ ಹೊಂದಿಕೊಂಡಿರುವ ಪ್ರದೇಶದಲ್ಲಿನ ಹಾಗೂ ಒಡಿಶಾ, ಆಂಧ್ರ, ತಮಿಳುನಾಡು, ಪುದುಚೆರಿಗಳಲ್ಲಿ ಸಮುದ್ರದ ಸ್ಥಿತಿಗತಿ, ಏರಿಳಿತ ಇಂದು ಮತ್ತು ನಾಳೆ ಗಂಭೀರವಾಗಿರಲಿದೆ.

ಮೀನುಗಾರರಿಗೆ ಎಚ್ಚರಿಕೆ

ಬಂಗಾಳಕೊಲ್ಲಿಗೆ ಹೊಂದಿಕೊಂಡಿರುವ ವಾಯವ್ಯ ಮತ್ತು ಈಶಾನ್ಯ ಭಾಗದ ಒಡಿಶಾ, ಆಂಧ್ರಪ್ರದೇಶ, ತಮಿಳುನಾಡು, ಪುದುಚೆರಿ ಕರಾವಳಿಗಳಲ್ಲಿ ಮೀನುಗಾರರು ನೀರಿಗೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.

***



(Release ID: 1664026) Visitor Counter : 131