ಪ್ರಧಾನ ಮಂತ್ರಿಯವರ ಕಛೇರಿ

ಅಸ್ಸಾಂ ಮಾಜಿ ಮುಖ್ಯಮಂತ್ರಿ ಶ್ರೀ ತರುಣ್ ಗೊಗೊಯ್ ನಿಧನಕ್ಕೆ ಪ್ರಧಾನಿ ಸಂತಾಪ

ಪ್ರಕಟಣಾ ದಿನಾಂಕ: 23 NOV 2020 6:32PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಮಾಜಿ ಮುಖ್ಯಮಂತ್ರಿ ಶ್ರೀ ತರುಣ್ ಗೊಗೊಯ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

"ಶ್ರೀ ತರುಣ್ ಗೊಗೊಯೋ ಅವರು ಜನಪ್ರಿಯ ನಾಯಕರಾಗಿದ್ದರು ಮತ್ತು ಅನುಭವಿ ಆಡಳಿತಗಾರರಾಗಿದ್ದರು, ಅಸ್ಸಾಂ ಮತ್ತು ಕೇಂದ್ರದಲ್ಲಿ ಅವರು ಸುದೀರ್ಘ ರಾಜಕೀಯ ಅನುಭವ ಹೊಂದಿದ್ದರು. ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಕುಟುಂಬದವರು ಮತ್ತು ಬೆಂಬಲಿಗರೊಂದಿಗೆ ಈ ದುಃಖದ ಸಂದರ್ಭದಲ್ಲಿ ನನ್ನ ಸಂವೇದನೆ ಇರುತ್ತದೆ. ಓಂ ಶಾಂತಿ" ಎಂದು ಟ್ವೀಟ್ ನಲ್ಲಿ ಪ್ರಧಾನಮಂತ್ರಿ ತಿಳಿಸಿದ್ದಾರೆ.

***


(ಪ್ರಕಟಣೆ ಐ.ಡಿ.: 1675279) ವಿಸಿಟರ್ ಕೌಂಟರ್ : 178