ಪ್ರಧಾನ ಮಂತ್ರಿಯವರ ಕಛೇರಿ

ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯ ನಿಧನಕ್ಕೆ ಪ್ರಧಾನಿ ಸಂತಾಪ

प्रविष्टि तिथि: 13 DEC 2020 5:13PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿದ್ಯಾ ವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿ "ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯ ಜಿ ಅವರು ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಶ್ರೇಷ್ಠ ಕೊಡುಗೆಗಾಗಿ ಸದಾ ಸ್ಮರಿಸಲ್ಪಡುತ್ತಾರೆ. ಸಂಸ್ಕೃತ ಮತ್ತು ಕನ್ನಡದ ಬಗ್ಗೆ ಅವರಿಗಿದ್ದ ಉತ್ಸಾಹ ಶ್ಲಾಘನಾರ್ಹ. ಅವರ ಕೃತಿಗಳು ಭವಿಷ್ಯದ ಪೀಳಿಗೆಯ ಮೇಲೆ ಪ್ರಭಾವ ಬೀರುತ್ತವೆ. ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ. " ಎಂದು ತಿಳಿಸಿದ್ದಾರೆ.

***


(रिलीज़ आईडी: 1680480) आगंतुक पटल : 168
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Assamese , Bengali , Punjabi , Gujarati , Odia , Tamil , Telugu , Malayalam