ಪ್ರಧಾನ ಮಂತ್ರಿಯವರ ಕಛೇರಿ

ಶ್ರೀ ರೊದ್ದಂ ನರಸಿಂಹ ಅವರ ನಿಧನಕ್ಕೆ ಪ್ರಧಾನಿ ಸಂತಾಪ

ಪ್ರಕಟಣಾ ದಿನಾಂಕ: 15 DEC 2020 9:55AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ರೊದ್ದಂ ನರಸಿಂಹ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

"ಶ್ರೀ ರೊದ್ದಂ ನರಸಿಂಹ ಅವರು ಭಾರತದ ಅತ್ಯುತ್ತಮ ಜ್ಞಾನ ಮತ್ತು ಪ್ರಶ್ನಿಸುವ ಸಂಪ್ರದಾಯವನ್ನು ನಿರೂಪಿಸಿದ್ದಾರೆ. ಅವರು ಅತ್ಯುತ್ತಮ ವಿಜ್ಞಾನಿಯಾಗಿ, ಭಾರತದ ಪ್ರಗತಿಗೆ ವಿಜ್ಞಾನ ಮತ್ತು ನಾವೀನ್ಯತೆಯ ಶಕ್ತಿಯನ್ನು ಸದುಪಯೋಗಪಡಿಸಿಕೊಳ್ಳುವ ಕುರಿತಂತೆ ಉತ್ಸುಕರಾಗಿದ್ದರು. ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪಗಳು. ಓಂ ಶಾಂತಿ." ಎಂದು ಪ್ರಧಾನಮಂತ್ರಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

***


(ಪ್ರಕಟಣೆ ಐ.ಡಿ.: 1680697) ವಿಸಿಟರ್ ಕೌಂಟರ್ : 172