ಪ್ರಧಾನ ಮಂತ್ರಿಯವರ ಕಛೇರಿ

ತ್ರಿಪುರಾ ರಾಜ್ಯೋತ್ಸವ: ರಾಜ್ಯದ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ

Posted On: 21 JAN 2021 8:59AM by PIB Bengaluru

ತ್ರಿಪುರಾ ರಾಜ್ಯೋತ್ಸವದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜ್ಯದ ಜನತೆಗೆ ಶುಭ ಕೋರಿದ್ದಾರೆ.

ಟ್ವೀಟ್ ನಲ್ಲಿ ಮೋದಿ ಅವರು, "ತ್ರಿಪುರಾ ರಾಜ್ಯೋದಯ ದಿನದ ವಿಶೇಷ ಸಂದರ್ಭದಲ್ಲಿ ರಾಜ್ಯದ ಜನತೆಗೆ ಶುಭಾಶಯಗಳು. ತ್ರಿಪುರಾ ಜನರ ಸಂಸ್ಕೃತಿ ಮತ್ತು ಆತ್ಮೀಯ ಸ್ವಭಾವಕ್ಕೆ ಭಾರತದಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತದೆ. ರಾಜ್ಯವು ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಪ್ರಗತಿಯನ್ನು ಸಾಧಿಸಿದೆ. ಅದೇ ಉತ್ಸಾಹ ಮುಂದುವರಿಯಲಿ." ಎಂದು ತಿಳಿಸಿದ್ದಾರೆ.

***



(Release ID: 1690859) Visitor Counter : 117