ಪ್ರಧಾನ ಮಂತ್ರಿಯವರ ಕಛೇರಿ

ಉತ್ತರಖಂಡದ ಚಮೋಲಿಯ ಹಿಮಪ್ರವಾಹ ಸಂತ್ರಸ್ತರಿಗೆ ಪರಿಹಾರ ಅನುಮೋದಿಸಿದ ಪ್ರಧಾನಮಂತ್ರಿ

Posted On: 07 FEB 2021 8:45PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಿಮಗಡ್ಡೆ ಕುಸಿದು ಸಂಭವಿಸಿದ ಹಿಮ ಪ್ರವಾಹ ದುರಂತದಲ್ಲಿ ಮೃತಪಟ್ಟವರ ಹತ್ತಿರದ ಬಂಧುಗಳಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಅನುಮೋದಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಮೊತ್ತವನ್ನೂ ಅವರು ಅನುಮೋದಿಸಿದ್ದಾರೆ.

ಪ್ರಧಾನಮಂತ್ರಿಗಳ ಕಾರ್ಯಾಲಯದ ಟ್ವೀಟ್ ನಲ್ಲಿ, "PM @narendramodi  ಅವರು ಉತ್ತರಖಂಡದ ಚಮೋಲಿಯಲ್ಲಿ ಹಿಮಗಡ್ಡೆ ಕುಸಿದು ಉಂಟಾದ ದುರಂತಮಯ ಹಿಮಪ್ರವಾಹದಲ್ಲಿ ಮೃತಪಟ್ಟವರ ಹತ್ತಿರದ ಬಂಧುಗಳಿಗೆ ಪಿಎಂಎನ್.ಆರ್.ಎಫ್.ನಿಂದ ತಲಾ 2 ಲಕ್ಷ ರೂ. ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ಅನುಮೋದಿಸಿದ್ದಾರೆ." ಎಂದು ತಿಳಿಸಲಾಗಿದೆ.

***



(Release ID: 1696094) Visitor Counter : 144