ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಶ್ರೀಲಂಕಾದ ಗೌರವಾನ್ವಿತ ಅಧ್ಯಕ್ಷ ಗೊಟಬಯ ರಾಜಪಕ್ಸ ದೂರವಾಣಿ ಸಮಾಲೋಚನೆ

Posted On: 13 MAR 2021 3:22PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಶ್ರೀಲಂಕಾದ ಗೌರವಾನ್ವಿತ ಅಧ್ಯಕ್ಷ ಗೊಟಬಯ ರಾಜಪಕ್ಸ  ಅವರು ದೂರವಾಣಿ ಸಮಾಲೋಚನೆ ನಡೆಸಿದರು.

ಉಭಯ ನಾಯಕರು ವಿಷಯವಾರು ಬೆಳವಣಿಗೆಗಳು ಮತ್ತು ಎರಡೂ ದೇಶಗಳ ನಡುವೆ ದ್ವಿಪಕ್ಷೀಯ ಹಾಗೂ ಬಹುಪಕ್ಷೀಯ ವೇದಿಕೆಗಳಲ್ಲಿ ನಡೆಯುತ್ತಿರುವ ಸಹಕಾರ ಸಂಬಂಧಗಳ ಬಗ್ಗೆ ಪರಿಶೀಲನೆ ನಡೆಸಿದರು. ಕೋವಿಡ್-19 ಸವಾಲುಗಳ ಹಿನ್ನೆಲೆಯಲ್ಲಿ  ಸಂಬಂಧಿಸಿದ ಅಧಿಕಾರಿಗಳ ನಡುವೆ ನಿರಂತರ ಸಂಪರ್ಕವನ್ನು ಕಾಯ್ದುಕೊಳ್ಳಲು ನಾಯಕರು ಒಪ್ಪಿಗೆ ನೀಡಿದರು.

ಭಾರತದ ನೆರಹೊರೆ ಮೊದಲು ನೀತಿಯಲ್ಲಿ ಶ್ರೀಲಂಕಾಗೆ ನೀಡಿರುವ ಪ್ರಾಮುಖ್ಯತೆಯನ್ನು ಪ್ರಧಾನಮಂತ್ರಿ ಪುನರುಚ್ಚರಿಸಿದರು. 

***



(Release ID: 1704774) Visitor Counter : 244