ಪ್ರಧಾನ ಮಂತ್ರಿಯವರ ಕಛೇರಿ

ಶ್ರೀ ರಾಮ್ ಸ್ವರೂಪ್ ಶರ್ಮಾ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

ಪ್ರಕಟಣಾ ದಿನಾಂಕ: 17 MAR 2021 12:18PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ರಾಮ್ ಸ್ವರೂಪ್ ಶರ್ಮಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, "ಶ್ರೀ ರಾಮ್ ಸ್ವರೂಪ್ ಶರ್ಮಾ ಒಬ್ಬ ಸಮರ್ಪಿತ ನಾಯಕರಾಗಿದ್ದರು, ಅವರು ಸದಾ ಜನರ ಸಮಸ್ಯೆ ಪರಿಹರಿಸಲು ಬದ್ಧರಾಗಿದ್ದರು. ಅವರು ಸಮಾಜದ ಒಳಿತಿಗಾಗಿ ಅವಿಶ್ರಾಂತವಾಗಿ ಶ್ರಮಿಸುತ್ತಿದ್ದರು. ಈ ದುಃಖದ ಸಮಯದಲ್ಲಿ ಅವರ ಕುಟುಂಬದವರು ಮತ್ತು ಬೆಂಬಲಿಗರೊಂದಿಗೆ ನನ್ನ ಸಂವೇದನೆ ಇದೆ. ಓಂ ಶಾಂತಿ." ಎಂದು ತಿಳಿಸಿದ್ದಾರೆ.

***


(ಪ್ರಕಟಣೆ ಐ.ಡಿ.: 1705416) ವಿಸಿಟರ್ ಕೌಂಟರ್ : 195