ಪ್ರಧಾನ ಮಂತ್ರಿಯವರ ಕಛೇರಿ

ವಿರಾರ್ ಆಸ್ಪತ್ರೆ ಅಗ್ನಿ ದುರಂತದಲ್ಲಿ ಸಾವು: ಪ್ರಧಾನಿ ಸಂತಾಪ, ಪರಿಹಾರಕ್ಕೆ ಅನುಮೋದನೆ

Posted On: 23 APR 2021 9:46AM by PIB Bengaluru

ಮಹಾರಾಷ್ಟ್ರದ ವಿರಾರ್‌ನ ಕೋವಿಡ್-19 ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರ ಶೀಘ್ರ ಚೇತರಿಕೆಗಾಗಿ ಅವರು ಹಾರೈಸಿದ್ದಾರೆ. ವಿರಾರ್‌ನ ಆಸ್ಪತ್ರೆಯ ಅಗ್ನಿ ದುರಂತದಿಂದ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ʻಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ನಿಧಿʼಯಿಂದ ತಲಾ 2 ಲಕ್ಷ ರೂ.ಗಳ ಪರಿಹಾರ ನೀಡಲು ಪ್ರಧಾನಿ ಅನುಮೋದನೆ ನೀಡಿದ್ದಾರೆ. ಗಂಭೀರವಾಗಿ ಗಾಯಗೊಂಡವರಿಗೆ 50,000 ರೂ. ಪರಿಹಾರ ನೀಡಲಾಗುವುದು.

*****



(Release ID: 1713711) Visitor Counter : 180