ಪ್ರಧಾನ ಮಂತ್ರಿಯವರ ಕಛೇರಿ
ಪಂಡಿತ್ ರಾಜನ್ ಮಿಶ್ರಾ ನಿಧನಕ್ಕೆ ಪ್ರಧಾನ ಮಂತ್ರಿ ಸಂತಾಪ
ಪ್ರಕಟಣಾ ದಿನಾಂಕ:
25 APR 2021 8:41PM by PIB Bengaluru
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಂಡಿತ್ ರಾಜನ್ ಮಿಶ್ರಾ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
“ಪಂಡಿತ್ ರಾಜನ್ ಮಿಶ್ರಾ ಅವರು ಶಾಸ್ತ್ರೀಯ ಸಂಗೀತ ಕ್ಷೇತ್ರದಲ್ಲಿ ಯಾರೂ ಅಳಿಸಲಾಗದ ಹೆಜ್ಜೆ ಗುರುತುಗಳನ್ನು ಬಿಟ್ಟುಹೋಗಿದ್ದಾರೆ. ಬನಾರಸ್ ಘರಾನಾ ಸಂಗೀತದೊಂದಿಗೆ ಒಡನಾಟ ಇಟ್ಟುಕೊಂಡಿದ್ದ ಮಿಶ್ರಾ ಜೀ ಅವರ ನಿರ್ಗಮನದಿಂದ ಕಲೆ ಮತ್ತು ಸಂಗೀತ ಲೋಕಕ್ಕೆ ಭರಿಸಲಾಗದ ನಷ್ಟ ಉಂಟಾಗಿದೆ. ಈ ಕ್ಷಣದ ದುಃಖದಲ್ಲಿ ಮಿಶ್ರಾ ಜೀ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನೋವು ಸಹಿಸುವ ಶಕ್ತಿ ನೀಡಲಿ” ಎಂದು ಮೋದಿ ಅವರು ಟ್ವೀಟ್ ಮಾಡಿದ್ದಾರೆ.
***
(ಪ್ರಕಟಣೆ ಐ.ಡಿ.: 1714060)
ವಿಸಿಟರ್ ಕೌಂಟರ್ : 211
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam