ಪ್ರಧಾನ ಮಂತ್ರಿಯವರ ಕಛೇರಿ

ಶ್ರೀ ಪ್ರತಾಪ್ ಭಾಯ್ ಷಾ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

ಪ್ರಕಟಣಾ ದಿನಾಂಕ: 06 MAY 2021 5:42PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಮಾಜಿ ಹಣಕಾಸು ಸಚಿವ ಶ್ರೀ ಪ್ರತಾಪ್ ಭಾಯ್ ಷಾ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

        ತಮ್ಮ ಟ್ವೀಟ್ ನಲ್ಲಿ ಪ್ರಧಾನಮಂತ್ರಿ ಅವರು, ಸಾರ್ವಜನಿಕ ಜೀವನ ಮತ್ತು ಪತ್ರಿಕೋದ್ಯಮ ಕ್ಷೇತ್ರಕ್ಕೆ ಷಾ ಅವರು ನೀಡಿರುವ ಕೊಡುಗೆಯನ್ನು ಸ್ಮರಿಸಿದ್ದಾರೆ ಮತ್ತು ಅಗಲಿದ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಪ್ರಾರ್ಥಿಸಿದ್ದಾರೆ. ಶ್ರೀ ನರೇಂದ್ರ ಮೋದಿ ಅವರು ಮೃತರ ಕುಟುಂಬಕ್ಕೆ ತಮ್ಮ ಸಂತಾಪಗಳನ್ನು ಸೂಚಿಸಿದ್ದಾರೆ.

 


 

*****


(ಪ್ರಕಟಣೆ ಐ.ಡಿ.: 1716658) ವಿಸಿಟರ್ ಕೌಂಟರ್ : 215