ಪ್ರಧಾನ ಮಂತ್ರಿಯವರ ಕಛೇರಿ

ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಶ್ರೀ ಜಗನ್ನಾಥ್ ಪಹಡಿಯಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

Posted On: 20 MAY 2021 9:07AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಶ್ರೀ ಜಗನ್ನಾಥ್ ಪಹಡಿಯಾ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ ‘’ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಶ್ರೀ ಜಗನ್ನಾಥ್ ಪಹಡಿಯಾ ಅವರ ನಿಧನದಿಂದ ತೀವ್ರ ದುಃಖವಾಗಿದೆ. ತಮ್ಮ ಸುದೀರ್ಘ ರಾಜಕೀಯ ಮತ್ತು ಆಡಳಿತಾತ್ಮಕ ವೃತ್ತಿ ಜೀವನದಲ್ಲಿ, ಅವರು ಮತ್ತಷ್ಟು ಸಾಮಾಜಿಕ ಸಬಲೀಕರಣಕ್ಕೆ ಗಮನಾರ್ಹ ಕೊಡುಗೆ ನೀಡಿದ್ದಾರೆ. ಅವರ ಕುಟುಂಬದವರಿಗೆ ಮತ್ತು ಬೆಂಬಲಿಗರಿಗೆ ನನ್ನ ಸಾಂತ್ವನಗಳು. ಓಂ ಶಾಂತಿಎಂದು ಹೇಳಿದ್ದಾರೆ.

***



(Release ID: 1720259) Visitor Counter : 180