ಪ್ರಧಾನ ಮಂತ್ರಿಯವರ ಕಛೇರಿ
ಪುಣೆಯ ಕಾರ್ಖಾನೆಯಲ್ಲಿ ನಡೆದ ಅಗ್ನಿ ಆಕಸ್ಮಿಕದಲ್ಲಿ ಮೃತರ ಕುಟುಂಬಗಳಿಗೆ ಪ್ರಧಾನಿ ಸಂತಾಪ: ಸಂತ್ರಸ್ತರಿಗೆ ಪರಿಹಾರ ಪ್ರಕಟ
ಪ್ರಕಟಣಾ ದಿನಾಂಕ:
07 JUN 2021 8:53PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಪುಣೆಯ ಕಾರ್ಖಾನೆಯಲ್ಲಿ ನಡೆದ ಆಗ್ನಿ ಆಕಸ್ಮಿಕದಲ್ಲಿ ಸಂಭವಿಸಿರುವ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿ ಅವರು ಪರಿಹಾರವನ್ನೂ ಸಹ ಪ್ರಕಟಿಸಿದ್ದಾರೆ.
ಪ್ರಧಾನಮಂತ್ರಿ ಅವರು “ಮಹಾರಾಷ್ಟ್ರದ ಪುಣೆಯ ಕಾರ್ಖಾನೆಯಲ್ಲಿ ನಡೆದ ಆಗ್ನಿ ಆಕಸ್ಮಿಕದಲ್ಲಿ ಸಂಭವಿಸಿರುವ ಜೀವಹಾನಿಯಿಂದ ನನಗೆ ದುಖಃವಾಗುತ್ತಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು’’ಎಂದು ಹೇಳಿದ್ದಾರೆ.
ಅಲ್ಲದೆ, “ಪ್ರಧಾನಮಂತ್ರಿ ಅವರು ಮಹಾರಾಷ್ಟ್ರದ ಪುಣೆಯ ಕೈಗಾರಿಕಾ ಘಟಕದಲ್ಲಿನ ಕಾರ್ಖಾನೆಯಲ್ಲಿ ಸಂಭವಿಸಿದ ಆಗ್ನಿ ಆಕಸ್ಮಿಕದಲ್ಲಿ ಮೃತರ ಕುಟುಂಬದವರಿಗೆ ಪಿಎಂಎನ್ ಆರ್ ಎಫ್ ನಿಂದ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ನೀಡಲಾಗುವುದು’’ ಎಂದು ಘೋಷಿಸಿದ್ದಾರೆ.
***
(ಪ್ರಕಟಣೆ ಐ.ಡಿ.: 1725269)
ವಿಸಿಟರ್ ಕೌಂಟರ್ : 198
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam