ಪ್ರಧಾನ ಮಂತ್ರಿಯವರ ಕಛೇರಿ

ಕಾನ್ಪುರ ರಸ್ತೆ ಅಪಘಾತಕ್ಕೆ ಪ್ರಧಾನ ಮಂತ್ರಿ ಅವರಿಂದ ಸಂತಾಪ


ಸಂತ್ರಸ್ತರಿಗೆ ಪರಿಹಾರ ಪ್ರಕಟ

Posted On: 09 JUN 2021 8:35AM by PIB Bengaluru

ಉತ್ತರ ಪ್ರದೇಶದ ಕಾನ್ಪುರ ನಗರದಲ್ಲಿಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಡಿದವರಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಅವರು, ಅಪಘಾತದಲ್ಲಿ ಮಡಿದವರ ಕುಟುಂಬ ವರ್ಗ ಮತ್ತು ಬಂಧುಗಳಿಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳು ಬೇಗನೇ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

 

ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ಅಪಘಾತದಲ್ಲಿ ಮಡಿದವರ ಪ್ರತಿ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಪ್ರಕಟಿಸಿದ್ದಾರೆ.

***



(Release ID: 1725634) Visitor Counter : 192