ಪ್ರಧಾನ ಮಂತ್ರಿಯವರ ಕಛೇರಿ

ಶ್ರೀ ಬುದ್ಧದೇವ್ ದಾಸ್ ಗುಪ್ತಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

Posted On: 10 JUN 2021 11:28AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚಿತ್ರ ನಿರ್ಮಾಪಕ, ಚಿಂತಕ ಮತ್ತು ಕವಿ ಶ್ರೀ ಬುದ್ಧದೇವ್ ದಾಸ್ ಗುಪ್ತಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು: “ಶ್ರೀ ಬುದ್ಧದೇವ್ ದಾಸ್ ಗುಪ್ತಾ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ವೈವಿಧ್ಯಮಯ ಕೃತಿಗಳು ಸಮಾಜದ ಎಲ್ಲಾ ವರ್ಗಗಳನ್ನು ತಲುಪಿವೆ. ಅವರು ಪ್ರಖ್ಯಾತ ಚಿಂತಕ ಮತ್ತು ಕವಿಯೂ ಆಗಿದ್ದರು. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಹಲವಾರು ಅಭಿಮಾನಿಗಳೊಂದಿಗೆ ನನ್ನ ಸಂವೇದನೆ ಇದೆ. ಓಂ ಶಾಂತಿ." ಎಂದು ತಿಳಿಸಿದ್ದಾರೆ.

***



(Release ID: 1725897) Visitor Counter : 158