ಪ್ರಧಾನ ಮಂತ್ರಿಯವರ ಕಛೇರಿ

ರಂಬಾನ್ ರಸ್ತೆ ಅಪಘಾತದಲ್ಲಿ ಮೃತರಾದವರಿಗೆ ಪ್ರಧಾನ ಮಂತ್ರಿ ಶೋಕ

Posted On: 02 JUL 2021 9:45PM by PIB Bengaluru

ಜಮ್ಮು-ಕಾಶ್ಮೀರದ ರಂಬಾನ್|ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಡಿದವರಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳ ಕಾರ್ಯಾಲಯ, “ರಂಬಾನ್|ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜೀವ ಕಳೆದುಕೊಂಡಿರುವುದು ಅತೀವ ನೋವು ತಂದಿದೆ. ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ನೀಡಲಿ. ಅವರಿಗೆ ಸಂತಾಪಗಳು. ಅಪಘಾತದ ಗಾಯಾಳುಗಳು ಬೇಗನೇ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ. ”

***



(Release ID: 1732517) Visitor Counter : 155