ಪ್ರಧಾನ ಮಂತ್ರಿಯವರ ಕಛೇರಿ

ಮುಂಬೈನಲ್ಲಿ ಗೋಡೆ ಕುಸಿತದಿಂದ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ


ಪಿಎಂಎನ್ಆರ್.ಎಫ್.ನಿಂದ ಪರಿಹಾರ ಘೋಷಣೆ

Posted On: 18 JUL 2021 10:47AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈನ ಚಂಬೂರ್ ಮತ್ತು ವಿಖರೋಲಿಯಲ್ಲಿ ಗೋಡೆ ಕುಸಿದು ಸಂಭವಿಸಿರುವ ಜೀವಹಾನಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಹತ್ತಿರದ ಬಂಧುಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನೂ ಪ್ರಕಟಿಸಿದ್ದಾರೆ.

ಪ್ರಧಾನಮಂತ್ರಿಗಳ ಕಾರ್ಯಾಲಯದ ಸರಣಿ ಟ್ವೀಟ್ ನಲ್ಲಿ, ಪ್ರಧಾನಮಂತ್ರಿಯವರು,  "ಮುಂಬೈನ ಚಂಬೂರ್ ಮತ್ತು ವಿಖ್ರೋಲಿಯಲ್ಲಿ ಗೋಡೆ ಕುಸಿತದಿಂದ ಸಂಭವಿಸಿರುವ ಜೀವಹಾನಿಯಿಂದ ದುಃಖಿತನಾಗಿದ್ದೇನೆ. ನೋವಿನ ಸಮಯದಲ್ಲಿ, ಸಂತ್ರಸ್ತರ ಕುಟುಂಬದೊಂದಿಗೆ ನನ್ನ ಸಂವೇದನೆ ಇರುತ್ತದೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ: ಪ್ರಧಾನಮಂತ್ರಿ @narendramodi.

ಮುಂಬೈನ ಗೋಡೆ ಕುಸಿತದಿಂದ ಮೃತಪಟ್ಟವರ ಹತ್ತಿರದ ಬಂಧುಗಳಿಗೆ ತಲಾ 2 ಲಕ್ಷ ರೂಪಾಯಿಗಳು ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರವನ್ನು ಪಿಎಂಎನ್ಆರ್.ಎಫ್.ನಿಂದ ಪ್ರಕಟಿಸಿದ್ದಾರೆ

***


(Release ID: 1736576) Visitor Counter : 274