ಪ್ರಧಾನ ಮಂತ್ರಿಯವರ ಕಛೇರಿ

ಮಹಾರಾಷ್ಟ್ರದ ರಾಯಗಢದಲ್ಲಿ ಸಂಭವಿಸಿದ ಭೂಕುಸಿತದಿಂದ ಉಂಟಾದ ಜೀವ ಹಾನಿಗೆ ಪ್ರಧಾನಿ ಸಂತಾಪ


ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ನಿಧಿಯಿಂದ ಪರಿಹಾರ ಘೋಷಣೆ

Posted On: 23 JUL 2021 6:43PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ರಾಯಗಢದಲ್ಲಿ ಸಂಭವಿಸಿದ ಭೂಕುಸಿತದಿಂದ ಉಂಟಾದ ಜೀವಹಾನಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ಮಹಾರಾಷ್ಟ್ರದ ರಾಯಗಢದಲ್ಲಿ ಸಂಭವಿಸಿದ ಭೂಕುಸಿತದಿಂದ ಉಂಟಾದ ಪ್ರಾಣಹಾನಿ ನೋವು ತಂದಿದೆ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ನಾನು ಹಾರೈಸುತ್ತೇನೆ.

ಭಾರಿ ಮಳೆಯಿಂದಾಗಿ ಮಹಾರಾಷ್ಟ್ರದಲ್ಲಿ ಉಂಟಾಗತಿರುವ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಮತ್ತು ಸಂತ್ರಸ್ತರಿಗೆ ಅಗತ್ಯ ನೆರವು ನೀಡಲಾಗುತ್ತಿದೆ" ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮೃತಪಟ್ಟವರ ಸಂಬಂಧಿಕರಿಗೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರ ಘೋಷಿಸಿದ್ದಾರೆ.

"ಮಹಾರಾಷ್ಟ್ರದ ರಾಯಗಢದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾ ನಿಧಿಯಿಂದ (ಪಿಎಂಎನ್ಆರ್ಎಫ್) ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು ಎಂದು ಪ್ರಧಾನಿ @narendramodi ಘೋಷಿಸಿದ್ದಾರೆ," ಎಂಬ ಪ್ರಧಾನಿಗಳ ಹೇಳಿಕೆಯನ್ನು ಉಲ್ಲೇಖಿಸಿ ಪ್ರಧಾನಿ ಮಂತ್ರಿಗಳ ಕಾರ್ಯಾಲಯದ ಟ್ವೀಟ್ಮಾಡಿದೆ.

***



(Release ID: 1738528) Visitor Counter : 161