ಪ್ರಧಾನ ಮಂತ್ರಿಯವರ ಕಛೇರಿ

ಬ್ಯಾಡ್ಮಿಂಟನ್ ಆಟಗಾರ ಶ್ರೀ ನಂದು ನಾಟೇಕರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

Posted On: 28 JUL 2021 11:50AM by PIB Bengaluru

ಬ್ಯಾಡ್ಮಿಂಟನ್ ಆಟಗಾರ ಶ್ರೀ ನಂದು ನಾಟೇಕರ್ ಅವರ ನಿಧನಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿಯವರು, "ಭಾರತದ ಕ್ರೀಡಾ ಇತಿಹಾಸದಲ್ಲಿ ಶ್ರೀ ನಂದು ನಾಟೇಕರ್ ಅವರಿಗೆ ವಿಶೇಷ ಸ್ಥಾನವಿದೆ. ಅವರು ಅತ್ಯುತ್ತಮ ಬ್ಯಾಡ್ಮಿಂಟನ್ ಆಟಗಾರ ಮತ್ತು ಉತ್ತಮ ಮಾರ್ಗದರ್ಶಕರಾಗಿದ್ದರು. ಅವರ ಯಶಸ್ಸು ಉದಯೋನ್ಮುಖ ಕ್ರೀಡಾಪಟುಗಳಿಗೆ ಪ್ರೇರಣೆಯಾಗಿ ಮುಂದುವರಿದಿದೆ. ಅವರ ನಿಧನದಿಂದ ತೀವ್ರ ದುಃಖವಾಗಿದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಆಲೋಚನೆಗಳು ಒತ್ತಾಸೆಯಾಗಿರುತ್ತವೆ. ಓಂ ಶಾಂತಿ." ಎಂದು ಸಂತಾಪ ಸೂಚಿಸಿದ್ದಾರೆ.

***



(Release ID: 1739893) Visitor Counter : 225