ಪ್ರಧಾನ ಮಂತ್ರಿಯವರ ಕಛೇರಿ

ಮಾಜಿ ಸಂಸದ, ಪತ್ರಕರ್ತ ಶ್ರೀ ಚಂದನ್ ಮಿತ್ರಾ ನಿಧನಕ್ಕೆ ಪ್ರಧಾನಿ ಶೋಕ

Posted On: 02 SEP 2021 9:32AM by PIB Bengaluru

ಮಾಜಿ ರಾಜ್ಯಸಭಾ ಸದಸ್ಯ ಮತ್ತು ಪತ್ರಕರ್ತ ಶ್ರೀ ಚಂದನ್ ಮಿತ್ರಾ ನಿಧನಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಅವರಿಗೆ ಇದ್ದ ಬುದ್ಧಿಶಕ್ತಿ ಮತ್ತು ಒಳನೋಟ ಅಪಾರ. ಇವೆರಡು ವಿಚಾರಗಳಿಂದ ಅವರು ಸದಾ ನೆನಪಿನಲ್ಲಿ ಉಳಿಯುತ್ತಾರೆ ಎಂದು ಪ್ರಧಾನ ಮಂತ್ರಿ ಸ್ಮರಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಅವರು, “ಶ್ರೀ ಚಂದನ್ ಮಿತ್ರಾ ಅವರು ಅಪಾರ ಬುದ್ಧಿಶಕ್ತಿ ಮತ್ತು ಒಳನೋಟ ಹೊಂದಿದ್ದರು. ಇದರಿಂದಲೇ ಅವರು ಸದಾ ಸ್ಮರಣೀಯರಾಗಿದ್ದಾರೆ. ಅವರು ಮಾಧ್ಯಮ ಮತ್ತು ರಾಜಕಾರಣದಲ್ಲಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ನೋವುಂಟಾಗಿದೆ. ಅವರ ಕುಟುಂಬ ಸದಸ್ಯರು ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ.” ಎಂದು ಹೇಳಿದ್ದಾರೆ.

***



(Release ID: 1751339) Visitor Counter : 179