ಪ್ರಧಾನ ಮಂತ್ರಿಯವರ ಕಛೇರಿ

ಅಖಾಡ ಪರಿಷತ್ತಿನ ಅಧ್ಯಕ್ಷರಾದ ಶ್ರೀ ನರೇಂದ್ರ ಗಿರಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

Posted On: 20 SEP 2021 8:10PM by PIB Bengaluru

ಅಖಾಡ ಪರಿಷತ್ತಿನ ಅಧ್ಯಕ್ಷರಾದ ಶ್ರೀ ನರೇಂದ್ರ ಗಿರಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಬಗ್ಗೆ ಟ್ವೀಟ್‌ ಮಾಡಿರುವ ಪ್ರಧಾನಿ ಹೀಗೆ ಹೇಳಿದ್ದಾರೆ: "ಅಖಾಡ ಪರಿಷತ್ತಿನ ಅಧ್ಯಕ್ಷರಾದ ಶ್ರೀ ನರೇಂದ್ರ ಗಿರಿ ಅವರ ಸಾವು ತುಂಬಾ ದುಃಖ ತಂದಿದೆ. ಆಧ್ಯಾತ್ಮಿಕ ಸಂಪ್ರದಾಯಗಳಿಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದ ಅವರು ಸಂತ ಸಮಾಜದ ಅನೇಕ ಪಂಥಗಳನ್ನು ಬೆಸೆಯುವಲ್ಲಿ ದೊಡ್ಡ ಪಾತ್ರ ವಹಿಸಿದರು. ದೇವರ ಪಾದದಲ್ಲಿ ಅವರಿಗೆ ಸ್ಥಾನ ದೊರೆಯಲಿ. ಓಂ ಶಾಂತಿ!"

***



(Release ID: 1756639) Visitor Counter : 182