ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗುಲಾಬ್ ಚಂಡಮಾರುತ ಕುರಿತು ಆಂಧ್ರಪ್ರದೇಶದ ಮುಖ್ಯಮಂತ್ರಿ ಜೊತೆ ಸಮಾಲೋಚಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 26 SEP 2021 3:50PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿ ಶ್ರೀ ವೈ.ಎಸ್. ಜಗಮೋಹನ್ ರೆಡ್ಡಿ ಅವರೊಂದಿಗೆ ಗುಲಾಬ್ ಚಂಡಮಾರುತದಿಂದ ಉಂಟಾಗಿರುವ ಪರಿಸ್ಥಿತಿ ಕುರಿತು ಸಮಾಲೋಚಿಸಿದರು. ಪ್ರಧಾನಮಂತ್ರಿ ಅವರು ಕೇಂದ್ರದ ಕಡೆಯಿಂದ ಸಾಧ್ಯವಾದ ಎಲ್ಲ ನೆರವು ನೀಡುವುದಾಗಿ ಭರವಸೆ  ನೀಡಿದರು.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ಆಂಧ್ರಪ್ರದೇಶದ ಮುಖ್ಯಮಂತ್ರಿ ಶ್ರೀ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ಗುಲಾಬ್ ಚಂಡಮಾರುತದಿಂದ ಉಂಟಾಗಿರುವ ಪರಿಸ್ಥಿತಿ ಕುರಿತು ಸಮಾಲೋಚಿಸಿದೆ. ಕೇಂದ್ರದಿಂದ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡುತ್ತೇನೆ. ನಾವು ಪ್ರತಿಯೊಬ್ಬರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥನೆಯನ್ನು ಸಲ್ಲಿಸುತ್ತೇನೆ’’ ಎಂದು ಹೇಳಿದ್ದಾರೆ.

***


(ಪ್ರಕಟಣೆ ಐ.ಡಿ.: 1758310) ವಿಸಿಟರ್ ಕೌಂಟರ್ : 302