ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಉತ್ತರಾಖಂಡದ ಕೆಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಸಂಭವಿಸಿರುವ ಜೀವಹಾನಿಗೆ ದುಃಖ ವ್ಯಕ್ಯಪಡಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 19 OCT 2021 9:11PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಾಖಂಡದ ಕೆಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಉಂಟಾಗಿರುವ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, "ಉತ್ತರಾಖಂಡದ ಕೆಲವು ಭಾಗಗಳಲ್ಲಿ ಭಾರೀ ಮಳೆಯಿಂದ ಉಂಟಾಗಿರುವ ಜೀವಹಾನಿಯಿಂದ ನಾನು ಕಳವಳಗೊಂಡಿದ್ದೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಬಾಧಿತರಿಗೆ ನೆರವಾಗಲು ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ. ನಾನು ಪ್ರತಿಯೊಬ್ಬರ ಕ್ಷೇಮ ಮತ್ತು ಸುರಕ್ಷತೆಗೆ ಪ್ರಾರ್ಥಿಸುತ್ತೇನೆ." ಎಂದು ತಿಳಿಸಿದ್ದಾರೆ.

***


(ಪ್ರಕಟಣೆ ಐ.ಡಿ.: 1765069) ವಿಸಿಟರ್ ಕೌಂಟರ್ : 220