ಪ್ರಧಾನ ಮಂತ್ರಿಯವರ ಕಛೇರಿ
ನವೆಂಬರ್ 18ರಂದು ʻತಡೆರಹಿತ ಸಾಲದ ಹರಿವು ಮತ್ತು ಆರ್ಥಿಕ ಬೆಳವಣಿಗೆಗಾಗಿ ಸಮನ್ವಯ ಸೃಷ್ಟಿʼ ಕುರಿತ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿ
ಪ್ರಕಟಣಾ ದಿನಾಂಕ:
18 NOV 2021 10:44AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ನವೆಂಬರ್ 18ರಂದು ಮಧ್ಯಾಹ್ನ 12 ಗಂಟೆಗೆ ನವದೆಹಲಿಯ ಅಶೋಕ್ ಹೋಟೆಲ್ನಲ್ಲಿ 'ತಡೆರಹಿತ ಸಾಲದ ಹರಿವು ಮತ್ತು ಆರ್ಥಿಕ ಬೆಳವಣಿಗೆಗಾಗಿ ಸಮನ್ವಯ ಸೃಷ್ಟಿ' ಕುರಿತ ಸಮಾವೇಶದ ಸಮಾರೋಪ ಸಮಾರಂಭನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಇಲಾಖೆಯು 2021ರ ನವೆಂಬರ್ 17-18ರಂದು ಈ ಸಮಾವೇಶವನ್ನು ಆಯೋಜಿಸಿದೆ. ವಿವಿಧ ಸಚಿವಾಲಯಗಳು, ಬ್ಯಾಂಕುಗಳು, ಹಣಕಾಸು ಸಂಸ್ಥೆಗಳು ಮತ್ತು ಕೈಗಾರಿಕಾ ಪ್ರತಿನಿಧಿಗಳು ಇದರಲ್ಲಿ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಕೇಂದ್ರ ಹಣಕಾಸು ಸಚಿವರು ಸಹ ಉಪಸ್ಥಿತರಿರುವರು.
***
(ಪ್ರಕಟಣೆ ಐ.ಡಿ.: 1772897)
ವಿಸಿಟರ್ ಕೌಂಟರ್ : 188
ಪ್ರಕಟಣೆಯನ್ನು ಇದರಲ್ಲಿ ಓದಿ:
Telugu
,
Assamese
,
Gujarati
,
English
,
Urdu
,
Marathi
,
हिन्दी
,
Bengali
,
Manipuri
,
Punjabi
,
Odia
,
Tamil
,
Malayalam