ಪ್ರಧಾನ ಮಂತ್ರಿಯವರ ಕಛೇರಿ
ದೇಶೀಯವಾಗಿ ವಿನ್ಯಾಸಗೊಳಿಸಲಾದ ಐಎನ್ಎಸ್ ವಿಶಾಖಪಟ್ಟಣಂ ಕಾರ್ಯಾರಂಭ ಮಾಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
21 NOV 2021 11:09PM by PIB Bengaluru
ಪ್ರಧಾನಮಂತ್ರಿ ಅವರು ದೇಶೀಯವಾಗಿ ವಿನ್ಯಾಸಗೊಳಿಸಲಾದ ಐಎನ್ಎಸ್ ವಿಶಾಖಪಟ್ಟಣಂ ಕಾರ್ಯಾರಂಭ ಮಾಡಿರುವುದರಿಂದ ಇಂದು ಹೆಮ್ಮೆಯ ದಿನವಾಗಿದೆ ಎಂದು ಹೇಳಿದರು. ಪೂರ್ಣಶಕ್ತಿಯೊಂದಿಗೆ ರಕ್ಷಣಾ ಪಡೆಗಳ ಆಧುನೀಕರಣ ನಿಟ್ಟಿನಲ್ಲಿ ಪ್ರಯತ್ನಗಳು ಮುಂದುವರಿಯಲಿವೆ ಎಂದು ಪ್ರಧಾನಮಂತ್ರಿ ಪುನರುಚ್ಛರಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ, “ರಕ್ಷಣಾ ವಲಯದಲ್ಲಿ ಆತ್ಮನಿರ್ಭರತೆ ಸಾಧಿಸುವ ಭಾರತದ ಅನ್ವೇಷಣೆಗೆ ಇಂದು ಹೆಮ್ಮೆಯ ದಿನವಾಗಿದೆ. ಐಎನ್ಎಸ್ ವಿಶಾಖಪಟ್ಟಣಂ ಇಂದು ಭಾರತೀಯ ನೌಕಾಪಡೆಗೆ ಸೇರ್ಪಡೆಯಾಗಿದೆ. ಇದು ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿದೆ ಮತ್ತು ನಮ್ಮ ಭದ್ರತೆಯ ಸ್ಥಿತಿ ಬಲವರ್ಧನೆಗೊಳಿಸಲಿದೆ. ರಕ್ಷಣಾ ಪಡೆಗಳ ಆಧುನೀಕರಣ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಸಂಪೂರ್ಣ ಶಕ್ತಿಯೊಂದಿಗೆ ಮುಂದುವರಿಯಲಿದೆ.” ಎಂದು ಹೇಳಿದ್ದಾರೆ.
***
(ಪ್ರಕಟಣೆ ಐ.ಡಿ.: 1774125)
ವಿಸಿಟರ್ ಕೌಂಟರ್ : 226
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam