ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಾತಾ ವೈಷ್ಣೋದೇವಿ ಭವನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಉಂಟಾದ ಜೀವ ಹಾನಿಗೆ ಪ್ರಧಾನಿ ಸಂತಾಪ

प्रविष्टि तिथि: 01 JAN 2022 8:49AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತಾ ವೈಷ್ಣೋ ದೇವಿ ಭವನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ಮಾತಾ ವೈಷ್ಣೋ ದೇವಿ ಭವನದಲ್ಲಿ ಕಾಲ್ತುಳಿತದಿಂದಾಗಿ ಉಂಟಾದ ಜೀವಹಾನಿ ಬಗ್ಗೆ ತೀವ್ರ ದುಃಖಿತನಾಗಿದ್ದೇನೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುವೆ. ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್ ಶ್ರೀ ಮನೋಜ್‌ ಸಿನ್ಹಾ @manojsinha, ಸಚಿವರಾದ ಶ್ರೀ ಡಾ. ಜಿತೇಂದ್ರ ಸಿಂಗ್‌@DrJitendraSingh, ನಿತ್ಯಾನಂದ ರಾಯ್‌ @nityanandraibjp ಅವರೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದೇನೆ," ಎಂದು ತಿಳಿಸಿದ್ದಾರೆ

***


(रिलीज़ आईडी: 1786845) आगंतुक पटल : 234
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Assamese , Manipuri , Punjabi , Gujarati , Odia , Tamil , Telugu , Malayalam