ಪ್ರಧಾನ ಮಂತ್ರಿಯವರ ಕಛೇರಿ

ಜಾರ್ಖಂಡ್‌ನ ಪಾಕುರ್‌ನಲ್ಲಿ  ಸಂಭವಿಸಿದ ಬಸ್ ಅಪಘಾತದಿಂದ ದುಃಖಿತರಾದ ಪ್ರಧಾನಿ


ಸಂತ್ರಸ್ತರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ನೀಡಲು ಅನುಮೋದನೆ

Posted On: 05 JAN 2022 8:55PM by PIB Bengaluru

ಜಾರ್ಖಂಡ್‌ನ ಪಾಕುರ್‌ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಸಾವು-ನೋವುಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್ಆರ್‌ಎಫ್‌) ತಲಾ 2 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು, ಗಾಯಗೊಂಡವರಿಗೆ 50,000  ರೂ.ಗಳನ್ನು ನೀಡಲಾಗುವುದು ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ತಿಳಿಸಿದೆ.

ಪ್ರಧಾನ ಮಂತ್ರಿ ಕಾರ್ಯಾಲಯ ಸರಣಿ ಟ್ವೀಟ್ ಗಳಲ್ಲಿ ಹೀಗೆ ಹೇಳಿದೆ:

"ಜಾರ್ಖಂಡ್‌ನ ಪಾಕುರ್‌ನಲ್ಲಿ ಸಂಭವಿಸಿದ ಬಸ್ ಅಪಘಾತದಿಂದ ನಾನು ದುಃಖಿತನಾಗಿದ್ದೇನೆ. ನೋವಿನ ಸಮಯದಲ್ಲಿ, ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಗಾಯಾಳುಗಳ ಶೀಘ್ರ ಚೇತರಿಕೆಗೆ ಪ್ರಾರ್ಥಿಸುವೆ: ಪ್ರಧಾನಿ ನರೇಂದ್ರ ಮೋದಿ@narendramodi"

"ಪಾಕುರ್‌ನಲ್ಲಿಸಂಭವಿಸಿದ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ʻಪಿಎಂಎನ್ಆರ್‌ಎಫ್‌ʼನಿಂದ ತಲಾ 2 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು."

***



(Release ID: 1787963) Visitor Counter : 150