ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಹಾರಾಷ್ಟ್ರದಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಗಳಿಗೆ ಪ್ರಧಾನಿ ಸಂತಾಪ


ಮೃತರ ಕುಟುಂಬಸ್ಥರಿಗೆ ಪಿಎಂಎನ್ ಆರ್ ಎಫ್ ನಿಂದ ಪರಿಹಾರ ಘೋಷಣೆ

प्रविष्टि तिथि: 25 JAN 2022 10:56AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಸೆಲ್ಸೂರ ಬಳಿಯ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಧಾನ ಮಂತ್ರಿಗಳು ಸಂತ್ರಸ್ತರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಪರಿಹಾರವನ್ನು ಘೋಷಿಸಿದ್ದಾರೆ.

ಸರಣಿ ಟ್ವೀಟ್ ಮೂಲಕ, ಪ್ರಧಾನ ಮಂತ್ರಿ ಕಾರ್ಯಾಲಯ ತಿಳಿಸಿದೆ;

"ಮಹಾರಾಷ್ಟ್ರದ ಸೆಲ್ಸೂರ ಬಳಿಯ ಅಪಘಾತದಿಂದ ಪ್ರಾಣಹಾನಿಯಾಗಿರುವುದು ನೋವು ತಂದಿದೆ. ಈ ದುಃಖದ ಸಮಯದಲ್ಲಿ, ನನ್ನ ಆಲೋಚನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಜೊತೆಯಲ್ಲಿವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ: ಪ್ರಧಾನಿ

ಪ್ರಧಾನಿ @narendramodi ಸೆಲ್ಸೂರ ಬಳಿ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ಪಿಎಂಎನ್ ಆರ್ ಎಫ್ ನಿಂದ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ  50,000 ರೂ. ಪರಿಹಾರ ಘೋಷಿಸಿದ್ದಾರೆ."

***


(रिलीज़ आईडी: 1792450) आगंतुक पटल : 292
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Assamese , Bengali , Punjabi , Gujarati , Odia , Tamil , Telugu , Malayalam