ಪ್ರಧಾನ ಮಂತ್ರಿಯವರ ಕಛೇರಿ

ಅನಂತಪುರಂ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಉಂಟಾದ ಜೀವ ಹಾನಿಗೆ ಪ್ರಧಾನಿ ಸಂತಾಪ


ಸಂತ್ರಸ್ತರಿಗೆ ʻಪಿಎಂಎನ್‌ಆರ್‌ಎಫ್ʼನಿಂದ ಪರಿಹಾರ ಘೋಷಣೆ

Posted On: 07 FEB 2022 9:52AM by PIB Bengaluru

ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿಯವರು ಸಂತ್ರಸ್ತರಿಗಾಗಿ ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಪರಿಹಾರ ನೀಡಲು ಅನುಮೋದನೆ ನೀಡಿದ್ದಾರೆ.

ಪ್ರಧಾನಮಂತ್ರಿಯವರ ಕಚೇರಿ ಬಗ್ಗೆ ಹೀಗೆ ಟ್ವೀಟ್‌ ಮಾಡಿದೆ:

"ಆಂಧ್ರ ಪ್ರದೇಶದ ಅನಂತಪುರಂ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಉಂಟಾದ ಜೀವ ಹಾನಿಯಿಂದ ನೋವಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು: ಪ್ರಧಾನಿ"

***



(Release ID: 1796092) Visitor Counter : 178