ಪ್ರಧಾನ ಮಂತ್ರಿಯವರ ಕಛೇರಿ
ಉತ್ತರಾಖಂಡದ ಚಂಪಾವತ್ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಂಟಾದ ಜೀವ ಹಾನಿಗೆ ಪ್ರಧಾನಿ ಸಂತಾಪ
ಸಂತ್ರಸ್ತರಿಗೆ 'ಪಿಎಂಎನ್ಆರ್ಎಫ್’ನಿಂದ ಪರಿಹಾರ ಘೋಷಣೆ
प्रविष्टि तिथि:
22 FEB 2022 12:32PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಾಖಂಡದ ಚಂಪಾವತ್ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿಯವರು ಸಂತ್ರಸ್ತರಿಗೆ ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್ಆರ್ಎಫ್) ಪರಿಹಾರ ಘೋಷಿಸಿದ್ದಾರೆ.
ಪ್ರಧಾನಮಂತ್ರಿಯವರ ಕಚೇರಿ ಈ ಕುರಿತು ಹೀಗೆ ಟ್ವೀಟ್ ಮಾಡಿದೆ;
"ಉತ್ತರಾಖಂಡದ ಚಂಪಾವತ್ನಲ್ಲಿ ಸಂಭವಿಸಿದ ಅಪಘಾತ ಹೃದಯ ವಿದ್ರಾವಕವಾಗಿದೆ. ಅದರಲ್ಲಿ ಮಡಿದವರ ಕುಟುಂಬಗಳಿಗೆ ನಾನು ಸಂತಾಪ ಸೂಚಿಸುತ್ತೇನೆ. ಸ್ಥಳೀಯ ಆಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ: ಪ್ರಧಾನಿ"
"ಉತ್ತರಾಖಂಡದಲ್ಲಿ ಸಂಭವಿಸಿದ ಅಪಘಾತದಿಂದ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ʻಪಿಎಂಎನ್ಆರ್ಎಫ್ʼನಿಂದ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ @narendramodi ಘೋಷಿಸಿದ್ದಾರೆ. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು."
***
(रिलीज़ आईडी: 1800248)
आगंतुक पटल : 228
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam