ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪಿಎಂ ಕಿಸಾನ್ ಸಮ್ಮಾನ್ ನಿಧಿ ಮತ್ತು ಕೃಷಿಗೆ ಸಂಬಂಧಿಸಿದ ಇತರ ಯೋಜನೆಗಳು ನಮ್ಮ ದೇಶದ ಕೋಟ್ಯಂತರ ರೈತರಿಗೆ ಹೊಸ ಶಕ್ತಿಯನ್ನು ನೀಡುತ್ತಿವೆ: ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 10 APR 2022 9:16AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ ಸಮ್ಮಾನ್ ನಿಧಿ ಮತ್ತು ಕೃಷಿಗೆ ಸಂಬಂಧಿಸಿದ ಇತರ ಯೋಜನೆಗಳು ನಮ್ಮ ದೇಶದ ಕೋಟ್ಯಂತರ ರೈತರಿಗೆ ಹೊಸ ಶಕ್ತಿಯನ್ನು ನೀಡುತ್ತಿವೆ ಎಂದು ಹೇಳಿದ್ದಾರೆ. ರೈತರ ಶಕ್ತಿಯನ್ನು ಪ್ರಮುಖವಾಗಿ ಪ್ರಸ್ತಾಪಿಸಿರುವ ಅವರು, ರೈತರು ಬಲಿಷ್ಠರಾದಾಗ ರಾಷ್ಟ್ರ ಸಮೃದ್ಧಿಯಾಗುತ್ತದೆ ಎಂದರು.
 
ಪ್ರಧಾನಮಂತ್ರಿ ತಮ್ಮ ಟ್ವೀಟ್ ನಲ್ಲಿ ಹೀಗೆ ತಿಳಿಸಿದ್ದಾರೆ. 
“ದೇಶವು ನಮ್ಮ ರೈತ ಸಹೋದರ ಸಹೋದರಿಯರ ಬಗ್ಗೆ ಹೆಮ್ಮೆಪಡುತ್ತದೆ, ಅವರು ಬಲಶಾಲಿಯಾದಷ್ಟೂ ನವ ಭಾರತವು ಹೆಚ್ಚು ಸಮೃದ್ಧವಾಗಿರುತ್ತದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಮತ್ತು ಕೃಷಿಗೆ ಸಂಬಂಧಿಸಿದ ಇತರ ಯೋಜನೆಗಳು ದೇಶದ ಕೋಟ್ಯಂತರ ರೈತರಿಗೆ ಹೊಸ ಶಕ್ತಿ ನೀಡುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ.’’
"हमारे किसान भाई-बहनों पर देश को गर्व है। ये जितना सशक्त होंगे, नया भारत भी उतना ही समृद्ध होगा। मुझे खुशी है कि पीएम किसान सम्मान निधि और कृषि से जुड़ी अन्य योजनाएं देश के करोड़ों किसानों को नई ताकत दे रही हैं।"

 

****


(ಪ್ರಕಟಣೆ ಐ.ಡಿ.: 1815438) ವಿಸಿಟರ್ ಕೌಂಟರ್ : 246