ಪ್ರಧಾನ ಮಂತ್ರಿಯವರ ಕಛೇರಿ
ಆಂಧ್ರಪ್ರದೇಶದ ಎಲೂರಿನ ರಾಸಾಯನಿಕ ಘಟಕದಲ್ಲಿ ಸಂಭವಿಸಿದ ದುರಂತದಲ್ಲಿ ಮಡಿದ ಕುಟುಂಬಗಳಿಗೆ ಪ್ರಧಾನಿ ಸಂತಾಪ
Posted On:
14 APR 2022 1:08PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಎಲೂರಿನ ರಾಸಾಯನಿಕ ಘಟಕದಲ್ಲಿ ಸಂಭವಿಸಿದ ದುರಂತದಲ್ಲಿ ಮಡಿದ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಅವರು ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.
ಪ್ರಧಾನಮಂತ್ರಿಗಳ ಕಾರ್ಯಾಲಯದ ಟ್ವೀಟ್ ನಲ್ಲಿ ಹೀಗೆ ತಿಳಿಸಲಾಗಿದೆ.
“ಆಂಧ್ರಪ್ರದೇಶದ ಎಲೂರಿನ ರಾಸಾಯನಿಕ ಘಟಕದಲ್ಲಿ ಸಂಭವಿಸಿದ ದುರಂತದಲ್ಲಿ ಆಗಿರುವ ಜೀವಹಾನಿಯಿಂದ ತೀವ್ರ ದುಃಖವಾಗಿದೆ. ಮೃತರ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ- ಪ್ರಧಾನಮಂತ್ರಿ ನರೇಂದ್ರ ಮೋದಿ’’
******
(Release ID: 1816971)
Visitor Counter : 160
Read this release in:
English
,
Urdu
,
Marathi
,
Hindi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam