ಪ್ರಧಾನ ಮಂತ್ರಿಯವರ ಕಛೇರಿ

ಅಮೇಥಿಯ ಗೌರಿಗಂಜ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಸಂತಾಪ

Posted On: 18 APR 2022 11:47AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉತ್ತರಪ್ರದೇಶದ ಅಮೇಥಿ ಜಿಲ್ಲೆಯ ಗೌರಿಗಂಜ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಅವರು ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಪ್ರಧಾನಮಂತ್ರಿ ಅವರು ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.

"ಉತ್ತರ ಪ್ರದೇಶದ ಅಮೇಥಿಯ ಗೌರಿಗಂಜ್ ನಲ್ಲಿ ನಡೆದ ರಸ್ತೆ ಅಪಘಾತವು ಅತ್ಯಂತ ದುಃಖಕರವಾಗಿದೆ.ಮೃತರ ಕುಟುಂಬಗಳಿಗೆ ನನ್ನ ತೀವ್ರ ಸಂತಾಪಗಳು. ಅಂತೆಯೇ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಬಯಸುತ್ತೇನೆ: ಪ್ರಧಾನಿ ನರೇಂದ್ರ ಮೋದಿ"

******



(Release ID: 1817702) Visitor Counter : 122