ಪ್ರಧಾನ ಮಂತ್ರಿಯವರ ಕಛೇರಿ

ಉತ್ತರ ಪ್ರದೇಶದ ಸಿದ್ಧಾರ್ಥನಗರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜೀವ ಹಾನಿಗೆ ಪ್ರಧಾನ ಮಂತ್ರಿ ಸಂತಾಪ

Posted On: 22 MAY 2022 10:21AM by PIB Bengaluru

ಸಂತ್ರಸ್ಥರಿಗೆ ಪಿ.ಎಂ.ಎನ್.ಆರ್.ಎಫ್. ನಿಂದ ತಾತ್ಕಾಲಿಕ ಪರಿಹಾರ ಘೋಷಣೆ. 
ಉತ್ತರ ಪ್ರದೇಶದ ಸಿದ್ಧಾರ್ಥನಗರದಲ್ಲಿ ಸಂಭವಿಸಿದ ರಸ್ತೆ ದುರಂತದಲ್ಲಿ ಮಡಿದವರಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ದುರಂತದಲ್ಲಿ  ಸಂತ್ರಸ್ಥರಾದವರಿಗೆ  ಶ್ರೀ ಮೋದಿ ಅವರು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) ತಾತ್ಕಾಲಿಕ ಪರಿಹಾರ ಘೋಷಿಸಿದ್ದಾರೆ. 
ಈ ಬಗ್ಗೆ ಪ್ರಧಾನ ಮಂತ್ರಿ ಅವರ ಕಚೇರಿ ಟ್ವೀಟ್ ಮಾಡಿದೆ -
"उत्तर प्रदेश के सिद्धार्थनगर में हुआ सड़क हादसा अत्यंत पीड़ादायक है। मेरी संवेदनाएं शोकाकुल परिजनों के साथ हैं। ईश्वर उन्हें इस अपार दुख को सहने की शक्ति प्रदान करे। इसके साथ ही मैं सभी घायलों के शीघ्र स्वस्थ होने की कामना करता हूं: PM @narendramodi"
 
 “ಉತ್ತರ ಪ್ರದೇಶದ ಸಿದ್ಧಾರ್ಥನಗರದಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವ ಕಳೆದುಕೊಂಡವರ ಉತ್ತರಾಧಿಕಾರಿಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಪಿ.ಎಂ.ಎನ್.ಆರ್.ಎಫ್. ನಿಂದ ನೀಡಲಾಗುವುದು ಎಂದು ಪ್ರಧಾನ ಮಂತ್ರಿ ಅವರು ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ 50,000 ರೂ ಗಳನ್ನು ನೀಡಲಾಗುವುದು”. 

 

 

****



(Release ID: 1827531) Visitor Counter : 116