ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕರ್ನಾಟಕದ ಹುಬ್ಬಳ್ಳಿಯಲ್ಲಿ ಸಂಭವಿಸಿದ ಅವಘಡದಲ್ಲಿ ಜೀವ ಹಾನಿಗೆ ಪ್ರಧಾನ ಮಂತ್ರಿ ಸಂತಾಪ


ಪಿ.ಎಂ.ಎನ್.ಆರ್.ಎಫ್.ನಿಂದ ತಾತ್ಕಾಲಿಕ ಪರಿಹಾರ ಘೋಷಣೆ

प्रविष्टि तिथि: 24 MAY 2022 6:05PM by PIB Bengaluru

ಕರ್ನಾಟಕದ ಹುಬ್ಬಳ್ಳಿಯಲ್ಲಿ ಸಂಭವಿಸಿದ ಅವಘಡದಲ್ಲಿ ಜೀವ ಹಾನಿಯಾಗಿರುವುದಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ  ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಜೀವ ಹಾನಿಯಾಗಿರುವ ಕುಟುಂಬದ ನಿಕಟ ಸಂಬಂಧಿಗಳಿಗೆ   ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ  ತಲಾ 2 ಲಕ್ಷ ರೂಪಾಯಿಗಳ ತಾತ್ಕಾಲಿಕ ಪರಿಹಾರ ಮತ್ತು ಘಟನೆಯಲ್ಲಿ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿಗಳ ಪರಿಹಾರವನ್ನು ಪ್ರಧಾನ ಮಂತ್ರಿ ಅವರು ಘೋಷಿಸಿದ್ದಾರೆ.
ಪ್ರಧಾನ ಮಂತ್ರಿ ಅವರ ಕಚೇರಿ ಈ ಬಗ್ಗೆ ಟ್ವೀಟ್ ಮಾಡಿದ್ದು ಅದರಲ್ಲಿ;
"ಕರ್ನಾಟಕದ ಹುಬ್ಬಳ್ಳಿಯಲ್ಲಿ ನಡೆದ ಅವಘಡದಲ್ಲಿ ಜೀವ ಹಾನಿಯಾಗಿರುವುದು ತೀವ್ರವಾದ ನೋವು ತಂದಿದೆ. ಸಂತ್ರಸ್ತರ ಕುಟುಂಬಕ್ಕೆ ನನ್ನ ಸಂತಾಪಗಳು.ಗಾಯಾಳುಗಳು ಬೇಗ ಗುಣಮುಖರಾಗುವಂತಾಗಲಿ:PM @narendramodi" ಎಂದು ಹೇಳಿದ್ದಾರೆ.

***


(रिलीज़ आईडी: 1828049) आगंतुक पटल : 283
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam