ಪ್ರಧಾನ ಮಂತ್ರಿಯವರ ಕಛೇರಿ

ಕೆಕೆ ಎಂದೇ ಜನಪ್ರಿಯರಾಗಿದ್ದ ಹೆಸರಾಂತ ಗಾಯಕ ಕೃಷ್ಣಕುಮಾರ್ ಕುನ್ನತ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

Posted On: 01 JUN 2022 12:30AM by PIB Bengaluru

ಕೆಕೆ ಎಂದೇ ಜನಪ್ರಿಯರಾಗಿದ್ದ ಹೆಸರಾಂತ ಗಾಯಕ ಕೃಷ್ಣಕುಮಾರ್ ಕುನ್ನತ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ಹಾಡುಗಳಲ್ಲಿ ಎಲ್ಲಾ ವಯೋಮಾನದ ಜನರಿಗೆ ವೈವಿಧ್ಯಮಯ ಭಾವನೆಗಳು ಪ್ರತಿಬಿಂಬಿಸುತ್ತವೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. 

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ. 

"ಕೆ ಕೆ ಎಂದೇ ಜನಪ್ರಿಯವಾಗಿದ್ದ ಹೆಸರಾಂತ ಗಾಯಕ ಕೃಷ್ಣಕುಮಾರ್ ಕುನ್ನತ್ ಅವರ ಅಕಾಲಿಕ ನಿಧನದಿಂದ ದುಃಖವಾಗಿದೆ. ಅವರು ಹಾಡುಗಳು ಎಲ್ಲ ವಯೋಮಾನದ‌ ಜನರ ಭಾವನೆಗಳಿಗೆ ತಟ್ಟಿ ಪ್ರತಿಬಿಂಬಿಸಿವೆ. ಅವರ ಹಾಡುಗಳಿಂದ ಅವರು ಸದಾ ನೆನಪಾಗುತ್ತಾರೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ"

*****

 



(Release ID: 1830061) Visitor Counter : 156