ಪ್ರಧಾನ ಮಂತ್ರಿಯವರ ಕಛೇರಿ
ಉತ್ತರಾಖಂಡದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮಡಿದವರಿಗೆ ಪ್ರಧಾನಿ ಸಂತಾಪ
ಪಿಎಂಎನ್ಆರ್ಎಫ್ ನಿಂದ ಪರಿಹಾರ ಘೋಷಣೆ
Posted On:
05 JUN 2022 9:23PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಾಖಂಡದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್ಆರ್ಎಫ್) ಬಸ್ ಅಪಘಾತದಲ್ಲಿ ಮೃತರಾದವರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಪ್ರಧಾನಿ ಘೋಷಿಸಿದ್ದಾರೆ.
ಪ್ರಧಾನ ಮಂತ್ರಿಯವರ ಕಾರ್ಯಾಲಯವು ಈ ಕುರಿತು ಟ್ವೀಟ್ ಮಾಡಿದೆ;
"ಉತ್ತರಾಖಂಡದಲ್ಲಿ ಸಂಭವಿಸಿದ ಬಸ್ ಅಪಘಾತವು ತುಂಬಾ ನೋವು ತಂದಿದೆ. ಇದರಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಸ್ಥಳೀಯ ಆಡಳಿತವು ಸಾಧ್ಯವಿರುವ ಎಲ್ಲ ಸಹಾಯವನ್ನು ಮಾಡುತ್ತಿದೆ: ಪ್ರಧಾನಿ @narendramodi "
"ಉತ್ತರಾಖಂಡದಲ್ಲಿ ನಡೆದ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ಪಿಎಂಎನ್ಆರ್ಎಫ್ ನಿಂದ ತಲಾ 2 ಲಕ್ಷ ರೂಪಾಯಿಗಳ ಪರಿಹಾರವನ್ನು ಪ್ರಧಾನ ಮಂತ್ರಿ ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ 50,000 ರೂಪಾಯಿಗಳನ್ನು ನೀಡಲಾಗುವುದು."
*****
(Release ID: 1831526)
Visitor Counter : 198
Read this release in:
Urdu
,
English
,
Marathi
,
Hindi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam