ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಣಿಪುರದಲ್ಲಿ ಭೂಕುಸಿತದಿಂದುಂಟಾದ ಪರಿಸ್ಥಿತಿಯನ್ನು ಪ್ರಧಾನಮಂತ್ರಿಯವರು ಪರಿಶೀಲಿಸಿದರು


ಕೇಂದ್ರದಿಂದ ಎಲ್ಲಾ ರೀತಿಯ ಸಹಾಯದ ಭರವಸೆಯನ್ನು ನೀಡಿದರು

Posted On: 30 JUN 2022 3:53PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಣಿಪುರದ ಮುಖ್ಯಮಂತ್ರಿ, ಶ್ರೀ ಎನ್. ಬಿರೇನ್ ಸಿಂಗ್ ಅವರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಸಂಭವಿಸಿದ ಭೂಕುಸಿತದಿಂದಾದ ದುರಂತ ಪರಿಸ್ಥಿತಿಯನ್ನು ಪರಿಶೀಲಿಸಿದರು.

 

ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿರುವರು:

"ಮಣಿಪುರ ಸಿಎಂ ಶ್ರೀ @NBirenSingh ಜೀ ಅವರೊಂದಿಗೆ ಮಾತನಾಡಿದೆ ಮತ್ತು ಭೂಕುಸಿತದಿಂದಾದ ದುರಂತ ಪರಿಸ್ಥಿತಿಯನ್ನು ಪರಿಶೀಲಿಸಿದೆ. ಕೇಂದ್ರದಿಂದ ಸಾಧ್ಯವಿರುವ ಎಲ್ಲ ಬೆಂಬಲದ ಭರವಸೆಯನ್ನು ನೀಡಲಾಯಿತು. ಸಂತ್ರಸ್ತರೆಲ್ಲರ ಸುರಕ್ಷತೆಗಾಗಿ ನಾನು ಪ್ರಾರ್ಥಿಸುತ್ತೇನೆ.

ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನಾನು ನನ್ನ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ"

 

******


(Release ID: 1838300) Visitor Counter : 147