ಪ್ರಧಾನ ಮಂತ್ರಿಯವರ ಕಛೇರಿ
ಮಣಿಪುರದಲ್ಲಿ ಭೂಕುಸಿತದಿಂದುಂಟಾದ ಪರಿಸ್ಥಿತಿಯನ್ನು ಪ್ರಧಾನಮಂತ್ರಿಯವರು ಪರಿಶೀಲಿಸಿದರು
ಕೇಂದ್ರದಿಂದ ಎಲ್ಲಾ ರೀತಿಯ ಸಹಾಯದ ಭರವಸೆಯನ್ನು ನೀಡಿದರು
ಪ್ರಕಟಣಾ ದಿನಾಂಕ:
30 JUN 2022 3:53PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಣಿಪುರದ ಮುಖ್ಯಮಂತ್ರಿ, ಶ್ರೀ ಎನ್. ಬಿರೇನ್ ಸಿಂಗ್ ಅವರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಸಂಭವಿಸಿದ ಭೂಕುಸಿತದಿಂದಾದ ದುರಂತ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿರುವರು:
"ಮಣಿಪುರ ಸಿಎಂ ಶ್ರೀ @NBirenSingh ಜೀ ಅವರೊಂದಿಗೆ ಮಾತನಾಡಿದೆ ಮತ್ತು ಭೂಕುಸಿತದಿಂದಾದ ದುರಂತ ಪರಿಸ್ಥಿತಿಯನ್ನು ಪರಿಶೀಲಿಸಿದೆ. ಕೇಂದ್ರದಿಂದ ಸಾಧ್ಯವಿರುವ ಎಲ್ಲ ಬೆಂಬಲದ ಭರವಸೆಯನ್ನು ನೀಡಲಾಯಿತು. ಸಂತ್ರಸ್ತರೆಲ್ಲರ ಸುರಕ್ಷತೆಗಾಗಿ ನಾನು ಪ್ರಾರ್ಥಿಸುತ್ತೇನೆ.
ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನಾನು ನನ್ನ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ"
******
(ಪ್ರಕಟಣೆ ಐ.ಡಿ.: 1838300)
ವಿಸಿಟರ್ ಕೌಂಟರ್ : 158
ಪ್ರಕಟಣೆಯನ್ನು ಇದರಲ್ಲಿ ಓದಿ:
Bengali
,
English
,
Urdu
,
Marathi
,
हिन्दी
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam