ಪ್ರಧಾನ ಮಂತ್ರಿಯವರ ಕಛೇರಿ

ನೈನಿತಾಲ್ ನಲ್ಲಿ ಕಾರು ಕೊಚ್ಚಿ ಹೋಗಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

Posted On: 08 JUL 2022 6:54PM by PIB Bengaluru

ಉತ್ತರಾಖಂಡದ ನೈನಿತಾಲ್ ನಲ್ಲಿ ಕಾರು ಕೊಚ್ಚಿ ಹೋಗಿದ್ದರಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

 

ಈ ಬಗ್ಗೆ ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದ್ದು ಅದರಲ್ಲಿ;

 

"ನೈನಿತಾಲ್ ಜಿಲ್ಲೆಯಲ್ಲಿ ಕಾರು ಕೊಚ್ಚಿ ಹೋಗಿರುವುದರಿಂದ ಸಂಭವಿಸಿದ ದುರಂತದಿಂದ ನೋವಾಗಿದೆ. ಈ ದುಃಖದ ಸಮಯದಲ್ಲಿ, ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಸಿಕ್ಕಿಹಾಕಿಕೊಂಡವರನ್ನು ಪಾರುಮಾಡಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ: ಪ್ರಧಾನಿ” ಎಂದು ಹೇಳಲಾಗಿದೆ.

 

*********



(Release ID: 1840261) Visitor Counter : 149