ಪ್ರಧಾನ ಮಂತ್ರಿಯವರ ಕಛೇರಿ

ಆಷಾಢ ಪೂರ್ಣಿಮೆಯ ಶುಭ ಸಂದರ್ಭದಲ್ಲಿ ಭಗವಾನ್ ಬುದ್ಧನ ಉದಾತ್ತ ಬೋಧನೆಗಳನ್ನು ಸ್ಮರಿಸಿದ ಪ್ರಧಾನಿ

Posted On: 13 JUL 2022 9:34AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಷಾಢ ಪೂರ್ಣಿಮೆಯ ಪವಿತ್ರ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.

ಶ್ರೀ ಮೋದಿ ಅವರು ಭಗವಾನ್ ಬುದ್ಧನ ಉದಾತ್ತ ಬೋಧನೆಗಳನ್ನು ಸ್ಮರಿಸಿದರು.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಅವರು;

"ಆಷಾಢ ಪೂರ್ಣಿಮೆಯ ಪವಿತ್ರ ಸಂದರ್ಭದಲ್ಲಿ ದೇಶವಾಸಿಗಳಿಗೆ ಶುಭಾಶಯಗಳು. ನಾವು ಭಗವಾನ್ ಬುದ್ಧನ ಉದಾತ್ತ ಬೋಧನೆಗಳನ್ನು ನೆನಪಿಸಿಕೊಳ್ಳುತ್ತೇವೆ. ನ್ಯಾಯಯುತ ಮತ್ತು ಸಹಾನುಭೂತಿಯ ಸಮಾಜ ನಿರ್ಮಾಣದ ಅವರ ಪ್ರಬುದ್ಧ ಮತ್ತು ಉದಾತ್ತ ದೃಷ್ಟಿಕೋನವನ್ನು ಸಾಕಾರಗೊಳಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತಿದ್ದೇವೆ" ಎಂದು ಪ್ರಧಾನಿ ತಿಳಿಸಿದ್ದಾರೆ.

 

***********



(Release ID: 1841144) Visitor Counter : 135