ಪ್ರಧಾನ ಮಂತ್ರಿಯವರ ಕಛೇರಿ
ಡಿಜಿಟಲ್ ಜ್ಯೋತ್ ನಲ್ಲಿ ಸ್ವಾತಂತ್ರ್ಯ ಹೋರಾಟಗಾರರಿಗೆ ತಮ್ಮ ಗೌರವ ಹಂಚಿಕೊಳ್ಳುವಂತೆ ನಾಗರಿಕರನ್ನು ಒತ್ತಾಯಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
23 JUL 2022 1:49PM by PIB Bengaluru
ಡಿಜಿಟಲ್ ಜ್ಯೋತ್ ನಲ್ಲಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಹಂಚಿಕೊಳ್ಳುವಂತೆ ಮತ್ತು ಆಜಾದಿ ಕಾ ಅಮೃತ ಮಹೋತ್ಸವವನ್ನು ಬಲಪಡಿಸುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ಅವರು,
“ಸ್ವಾತಂತ್ರ್ಯ ಹೋರಾಟದ ವೀರರಿಗೊಂದು ವಿಶೇಷ ಗೌರವ!
ಡಿಜಿಟಲ್ ಜ್ಯೋತ್ ನಲ್ಲಿ ತಂತ್ರಜ್ಞಾನ ಅಳವಡಿಸಲಾಗಿದೆ ಮತ್ತು ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆಯ ಹೃತ್ಪೂರ್ವಕ ಸಂದೇಶ ಹಂಚಿಕೊಳ್ಳಲು ನಿಮಗೆ ಅವಕಾಶ ನೀಡುತ್ತದೆ.”
“ದೆಹಲಿಯ ಸೆಂಟ್ರಲ್ ಪಾರ್ಕ್ ನಲ್ಲಿ ಆಗಸದಲ್ಲಿ ಬೆಳಕಿನ ಕಿರಣದ ವ್ಯವಸ್ಥೆ ಅಳವಡಿಸಲಾಗಿದೆ. ಸಲ್ಲಿಸಿದ ಪ್ರತಿಯೊಂದು ಗೌರವವು ಡಿಜಿಟಲ್ ಜ್ಯೋತ್ ನ ಪ್ರಕಾಶವನ್ನು ಹೆಚ್ಚಿಸುತ್ತದೆ. ಈ ವಿಶೇಷ ಪ್ರಯತ್ನದಲ್ಲಿ ಭಾಗವಹಿಸಿ ಮತ್ತು ಆಜಾದಿ ಕಾ ಅಮೃತ ಮಹೋತ್ಸವವನ್ನು ಬಲಪಡಿಸಿ” ಎಂದು ಹೇಳಿದ್ದಾರೆ.
***********
(ಪ್ರಕಟಣೆ ಐ.ಡಿ.: 1844287)
ವಿಸಿಟರ್ ಕೌಂಟರ್ : 148
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam